- ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ
- ಕರಾವಳಿ ಹಾಗೂ ಒಳನಾಡು ಸೇರಿ 07 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange alert for districts)
- ಕೆಲವೆಡೆ 150 ಮಿಲಿ ಮೀಟರ್ಗಿಂತಲೂ ಹೆಚ್ಚಿನ ಮಳೆ ನಿರೀಕ್ಷೆ ಇದೆ ಎಂದ IMD
Bengaluru: ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ (Arabian Sea) ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಕೆಲವೆಡೆ 150 ಮಿಲಿ ಮೀಟರ್ಗಿಂತಲೂ ಹೆಚ್ಚಿನ ಮಳೆ ನಿರೀಕ್ಷೆ ಇದೆ.
ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ.
ಕರಾವಳಿಯ ಉಡುಪಿ (Udupi), ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಅಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಭಾರೀ ಮುನ್ಸೂಚನೆ ಇರುವುದರಿಂದ ಮುಂದಿನ ಹಲವು ದಿನಗಳವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಕೆದಂತೆ ಸೂಚನೆ ನೀಡಲಾಗಿದೆ.
ಒಂದು ವೇಳೆ ಇಳಿದರೂ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಗೆ (fishing) ಮುಂದಾಗುವಂತೆ ಪ್ರಕಟಣೆಯಲ್ಲಿ ಸೂಚನೆ ನೀಡಿದೆ.
ಈಗಾಗಲೇ ಕರವಾಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅನಾಹುತಗಳೇ ಸಂಭವಿಸಿವೆ.
ಇದನ್ನು ಓದಿ : ಬೆಂಗಳೂರು ಜನರ ಕೈ ಸುಡಲಿದೆ ಆಟೋ ದರ – ಕನಿಷ್ಠ ದರ 36 ರೂ.ಗೆ ಏರಿಕೆ
ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಜನರು ಇನ್ನೇನು ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. (Orange alert for districts)