ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 30ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು,ಮಾ. 22: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಕಂದೇಗಾಲದ ನಾಗೇಂದ್ರ ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬೊಪ್ಪನಹಳ್ಳಿ ಗ್ರಾಮದ ನಾಗದೇವಿ ಎಂಬುವರ ವಿವಾಹ ಸರಗೂರು ತಾಲೂಕಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯುತ್ತಿರುವ ಮದುವೆ ರಿಸೆಪ್ಷನ್ ಮುಗಿಸಿ ಗ್ರಾಮಸ್ಥರನ್ನ ವಾಪಸ್ ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ಬೇಜಾವಾಬ್ದಾರಿ ತನದಿಂದ ಖಾಸಗಿ ಬಸ್ ಉರುಳಿಬಿದ್ದಿದೆ.

ಗಾಯಗೊಂಡಿರುವವರನ್ನು ಮೈಸೂರು, ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಘಟನೆ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಧಾರಾ ಮುಹೂರ್ತ ನಡೆಯುತ್ತಿರುವ ಮದುವೆ ಮನೆಯಲ್ಲಿ ನೀರವ ಮೌನ ಅವರಿಸಿದೆ.

Exit mobile version