ಮುಂಬೈ, ಮೇ. 21: ತೌಖ್ತೆ ಚಂಡಮಾರುತದ ಪ್ರಭಾವಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾದ ಪಿ–305 ಬಾರ್ಜ್ನ ಕ್ಯಾಪ್ಟನ್ ಮತ್ತು ಇತರ ಕೆಲವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಸಂಬಂಧ ಬಾರ್ಜ್ನ ಮುಖ್ಯ ಎಂಜಿನಿಯರ್ ರಹಮನ್ ಹುಸೈನ್ ಅವರು ಯೆಲ್ಲೋ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಆಧಾರದ ಮೇಲೆ ಕ್ಯಾಪ್ಟ್ನ್ ರಾಕೇಶ್ ಬಳ್ಳ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
‘ಕಳೆದ ಐದು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾದ ಪಿ–305 ಬಾರ್ಜ್ನಲ್ಲಿ 261 ಸಿಬ್ಬಂದಿ ಇದ್ದರು. ಗುರುವಾರದವರೆಗೆ 186 ಮಂದಿಯನ್ನು ರಕ್ಷಿಸಲಾಗಿದ್ದು, 49 ಮಂದಿ ಮೃತಪಟ್ಟಿದ್ಧಾರೆ. ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.