ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ

ಬೆಂಗಳೂರು, ಜ. 05: ಪಡಿತರ ಚೀಟಿಗೆ  ಇನ್ಮುಂದೆ ರಾಜ್ಯದ ನ್ಯಾಯ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಅವರು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಅವರು ಮಾತನಾಡಿ, ರಾಜ್ಯ ಬಜೆಟ್ ಮಂಡನೆಯ ನಂತರ ಪಡಿತರ ಚೀಟಿಗೆ ಇನ್ನೂ ಹಂತ ಹಂತವಾಗಿ ರಾಜ್ಯಾದ್ಯಂತ ಈ ಸೌಲಭ್ಯಗಳನ್ನು ವಿತರಿಸಲಾಗುವುದು. ಸದ್ಯದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಮುಂದಿನ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದರು.

Exit mobile version