ಹುಟ್ಟೂರಿನಲ್ಲಿ ಮಣ್ಣಲ್ಲಿ ಮಣ್ಣಾದ ಪದ್ಮಶ್ರೀ ಪುರಸ್ಕೃತ ನಟ ಸಂಚಾರಿ ವಿಜಯ್‌

ಚಿಕ್ಕಮಗಳೂರು, ಜೂ. 15: ಬೈಕ್ ಅಪಘಾತದಲ್ಲಿ ಸಾವು-ಬದುಕಿನ ನಡುವೆ ಹೋರಾಡಿ, ಮೃತಪಟ್ಟಂತ ನಟ ಸಂಚಾರಿ ವಿಜಯ್ ಅವರ ಮೃತ ದೇಹವನ್ನು, ಅಂತ್ಯಕ್ರಿಯೆಗಾಗಿ ಹುಟ್ಟೂರು ಪಂಚನಹಳ್ಳಿಗೆ ತರಲಾಗಿದೆ. ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಪಂಚನಹಳ್ಳಿಯ ಗ್ರಾಮಸ್ಥರು ಸೇರಿದಂತೆ ಅಕ್ಕ ಪಕ್ಕದ ಊರಿನವರು ವೀಕ್ಷಿಸಲು ಮುಗಿ ಬಿದ್ದಿದ್ದರು. ಈ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ನಟ ಸಂಚಾರಿ ವಿಜಯ್ ಮಣ್ಣಲ್ಲಿ ಮಣ್ಣಾದರು.

ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದರು. ಇಂತಹ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಬಳಿಕ, ಅವರ ಪಾರ್ಥೀವ ಶರೀರವನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಗೆ ತರಲಾಗಿದೆ.

ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರ ಅವರ ಹುಟ್ಟೂರಿಗೆ ಆಗಮಿಸುತ್ತಿದ್ದಂತೇ, ಗ್ರಾಮಸ್ಥರು ಅಂತಿಮ ದರ್ಶನಕ್ಕಾಗಿ ಮುಗಿ ಬಿದ್ದಿದ್ದಾರೆ. ಪಂಚನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರರದ ಅಂತಿಮ ದರ್ಶನ ಪಡೆಯುತ್ತಿದ್ದು, ಈ ಬಳಿಕ ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಹುಟ್ಟೂರು ಪಂಚನಹಳ್ಳಿಯಲ್ಲಿ ನಟ ಸಂಚಾರಿ ವಿಜಯ್ ಅವರ ಮೃತದೇಹದ ಅಂತ್ಯಕ್ರಿಯೆ, ಅವರ ಸ್ನೇಹಿತ ರಘು ತೋಟದಲ್ಲಿ ನೆರವೇರಲಿದೆ.

ಈಗಾಗಲೇ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಗೆ ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀಗಳ ನೇತೃತ್ವದಲ್ಲಿ ನೆರವೇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಂದು ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಅವರ ಅಂತ್ಯಕ್ರಿಯೆ, ನಟ ಸಂಚಾರಿ ವಿಜಯ್ ಗೆಳೆಯ ರಘು ಅವರ ತೋಟದಲ್ಲಿ ನೆರವೇರಲಿದೆ. ಈ ಬಳಿಕ ಸಮಾಧಿಯಲ್ಲಿ ಇರಿಸಿ, ವಿಲ್ವ ಪತ್ರೆ, ವಿಭೂತಿಗಳಿಂದ ವಿಧಿ-ವಿಧಾನ ನರೆವೇರಿಸಿ, ಮಣ್ಣಮಾಡಲಾಯಿತು. ಈ ಮೂಲಕ ಬಾರದ ಲೋಕಕ್ಕೆ ನಟ ಸಂಚಾರಿ ವಿಜಯ್ ತೆರಳಿದ್ದಾರೆ.

Exit mobile version