• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

56 ಮುಸ್ಲಿಂ ದೇಶಗಳಿದ್ದರು ಕಾಶ್ಮೀರಕ್ಕಾಗಿ ಏನೂ ಮಾಡಲಾಗಲಿಲ್ಲ : ಇಮ್ರಾನ್ ಖಾನ್!

Mohan Shetty by Mohan Shetty
in ದೇಶ-ವಿದೇಶ
pakistan
0
SHARES
0
VIEWS
Share on FacebookShare on Twitter

ಜಮ್ಮು ಕಾಶ್ಮೀರದ(Jammu Kashmir) ಜನತೆ ದಶಕಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ಅವರು ಏಳು ದಶಕಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಕಾಶ್ಮೀರದ ಜನತೆಯ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ. ಕಾಶ್ಮೀರಕ್ಕಾಗಿ 56 ಮುಸ್ಲಿಂ ದೇಶಗಳು ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನದ(Pakisthan) ಪ್ರಧಾನಿ(Prime Minister) ಇಮ್ರಾನ್ ಖಾನ್(Imran Khan) ಹೇಳಿದರು.

pakisthan

ಇಸ್ಲಾಮಾಬಾದ್ನಲ್ಲಿ ನಡೆದ “ಆರ್ಗನೈಸೇಷನ್ ಆಪ್ ಇಸ್ಲಾಮಿಕ್ ಕೋ ಆಪರೇಶನ್” ಕಾರ್ಯಕ್ರಮದಲ್ಲಿ ಮಾತನಾಡಿದ ಇಮ್ರಾನ್ ಖಾನ್, ನಾವು ಜಗತ್ತಿನಲ್ಲಿ 1.5 ಶತಕೋಟಿ ಮುಸ್ಲಿಂಮರಿದ್ದೇವೆ. ಆದರು ಕಾಶ್ಮೀರ ಮತ್ತು ಪಾಲೆಸ್ತೀನ್ ಜನರಿಗೆ ಇಲ್ಲಿಯವರೆಗೂ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ನಮ್ಮ ನಮ್ಮಲ್ಲೇ ಭಿನ್ನಾಭಿಪ್ರಾಯಗಳಿವೆ, ಹೀಗಾಗಿಯೇ ಭಾರತ ಸೇರಿದಂತೆ ಐರೋಪ್ಯ ದೇಶಗಳು ನಮ್ಮ ಒಕ್ಕೂಟಕ್ಕೆ ಬೆಲೆ ನೀಡುತ್ತಿಲ್ಲ. 56 ರಾಷ್ಟ್ರಗಳ ಒಕ್ಕೂಟ ನಮ್ಮದಾಗಿದ್ದರು, ಒಗ್ಗಟ್ಟು ಇಲ್ಲದಿರುವ ಕಾರಣ ಜಗತ್ತು ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದರು.

ಇನ್ನು ಜಮ್ಮು ಕಾಶ್ಮೀರ ಮತ್ತು ಪಾಲೆಸ್ತೀನ್ ನಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಅದರ ವಿರುದ್ದ ಧ್ವನಿ ಎತ್ತುವಲ್ಲಿ ನಾವು ಸೋತಿದ್ದೇವೆ. ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕಾಗಿ ನಾವು ಅನೇಕ ದಶಕಗಳಿಂದ ಆಗ್ರಹಿಸುತ್ತಿದ್ದೇವೆ, ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ. ಯಾವುದೇ ಭಯವಿಲ್ಲದೇ ಭಾರತ ಕಾಶ್ಮೀರದಲ್ಲಿ 370 ವಿಧಿಯನ್ನು ತೆಗೆದುಹಾಕಿತು. 1.5 ಶತಕೋಟಿ ಮುಸ್ಲಿಮರಿದ್ದರು ನಮ್ಮ ಜನರಿಗೆ ನ್ಯಾಯ ಕೊಡಿಸಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.

imran khan

ಇದೇ ವೇದಿಕೆಯಲ್ಲಿ ಮಾತನಾಡಿದ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬೀನ್ ಫರ್ಹಾನ್ ಕೂಡಾ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರು. ನಾವೆಲ್ಲರೂ ನಮ್ಮ ನಮ್ಮಲ್ಲೇ ಕಿತ್ತಾಡುವುದರಿಂದ ಜಗತ್ತು ನಮ್ಮನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹೀಗಾಗಿ ನಾವು ಒಗ್ಗೂಡಬೇಕು. ನಾವು ಯಾವುದೇ ದೇಶವನ್ನು ವಶಪಡಿಸಿಕೊಳ್ಳುವುದರ ಬಗ್ಗೆ ಮಾತನಾಡುತ್ತಿಲ್ಲ. ಕಾಶ್ಮೀರ ಮತ್ತು ಪಾಲೆಸ್ತೀನ್ ಜನರ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದೇವೆ. ಈ ಘೋರ ಅನ್ಯಾಯವನ್ನು ಪ್ರತಿಭಟಿಸಲು ನಮ್ಮ ಧ್ವನಿ ಸಾಕಾಗುವುದಿಲ್ಲ. ಹೀಗಾಗಿ ನಾವು ಮತ್ತಷ್ಟು ಬಲಿಷ್ಠರಾಗಬೇಕೆಂದು ಮುಸ್ಲಿಂ ದೇಶಗಳಿಗೆ ಕರೆ ನೀಡಿದರು.

Tags: controversyimrankhankashmirPakistan

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.