- ಶತ್ರುವನ್ನು ಹೇಗೆ ಎದುರಿಸಬೇಕೆಂದು ಚೆನ್ನಾಗಿ ಗೊತ್ತಿದೆ ಎಂದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
- ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಉರ್ದುವಿನಲ್ಲಿ ಪೋಸ್ಟ್
- ಭಾರತ ಸೇನೆ ಗುರಿಯಾಗಿಸಿಕೊಂಡ ಸ್ಥಳಗಳೆಲ್ಲ ನಾಗರಿಕ ಸ್ಥಳಗಳಾಗಿದ್ದವೆಂದು ಕಿಡಿ (Pakistan PM issues retaliatory statement)
New delhi: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯ (Indian Army) ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಪಾಕ್ ಆಕ್ರಮಿತ ಕಾಶ್ಮೀರ (Pakistan Occupied Kashmir) (POK) ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ (Missiles on bases) ದಾಳಿ ನಡೆಸಿದೆ.
ಭಾರತೀಯ ಸೇನೆಯ ಈ ಕ್ಷಿಪ್ರ ದಾಳಿಯಿಂದ ಪಾಕಿಸ್ತಾನ ಅಕ್ಷರಶಃ ನಡುಗಿದೆ (Pakistan is literally shaking.) . ಆದರೆ ತನ್ನ ಭಯವನ್ನು ತೋರ್ಪಡಿಸಿಕೊಳ್ಳದ ಪಾಕಿಸ್ತಾನ, ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತೀಕಾರ (Revenge) ತೀರಿಸಿಕೊಳ್ಳುವುದಾಗಿ ಹೇಳಿದೆ.
ಈ ಕುರಿತು ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಫ್ (Shahbaz Sharif) ,ಕುತಂತ್ರಿ ವೈರಿಯು ಪಾಕಿಸ್ತಾನದ ಐದು ಸ್ಥಳಗಳ (5 Places) ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ (War) ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ.

ಮತ್ತು ಅತ್ಯಂತ ಪ್ರಬಲ ಪ್ರತಿಕ್ರಿಯೆಯನ್ನು (Powerful response) ನೀಡಲಾಗುತ್ತಿದೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ (Armed forces) ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ (Succeed) ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್ ಹಾಕಿದ್ದಾರೆ.
ನಿರ್ದಿಷ್ಟ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನವು ಭಾರತದತ್ತ (Pakistan to India) ಗುಂಡು ಹಾರಿಸಲು ಆರಂಭಿಸಿದ್ದು, ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ (Gunfight) ನಡೆಯುತ್ತಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ (General Ahmed Sharif Chaudhry) ಅವರು ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.
ಪಂಜಾಬ್ ಮತ್ತು ಪಿಒಕೆ ನಗರಗಳ (Cities of Punjab and PoK) ಮೇಲೆ ದಾಳಿಗಳು ನಡೆದಿವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಇನ್ನು ಈ ಕುರಿತಾಗಿ ಪಾಕಿಸ್ತಾನದ ರಕ್ಷಣಾ (Defense of Pakistan) ಸಚಿವ ಖವಾಜಾ ಮುಹಮ್ಮದ್ ಆಸಿಫ್ ಅವರು ಭಾರತ ಬಹು ಸ್ಥಳಗಳನ್ನು (Pakistan PM issues retaliatory statement) ಗುರಿಯಾಗಿಸಿಕೊಂಡಿತ್ತು ಅವೆಲ್ಲವೂ ನಾಗರಿಕ ಸ್ಥಳಗಳಾಗಿತ್ತು .
ಇದನ್ನು ಓದಿ : http://ಕೊನೆಗೂ ಕ್ಷಮಿಸು ಕರ್ನಾಟಕ ಎಂದ ಸೋನು ನಿಗಮ್
ಅಮಾಯಕರ ಮೇಲೆ ಭಾರತ ಸೇನೆ (Indian Army) ಆಕ್ರಮಣ ಮಾಡಿದೆ ಎಂದು ಹೇಳಿದ್ದಾರೆ.