• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ರಾಜ್ಯದಲ್ಲಿಯೂ ಪಠಾಣ್ ಚಿತ್ರ ಬಿಡುಗಡೆಗೆ ತೀವ್ರ ವಿರೋಧ : ಹಲವು ಜಿಲ್ಲೆಗಳಲ್ಲಿ  ಕಲ್ಲು ತೂರಾಟ

Rashmitha Anish by Rashmitha Anish
in ಮನರಂಜನೆ
ರಾಜ್ಯದಲ್ಲಿಯೂ ಪಠಾಣ್ ಚಿತ್ರ ಬಿಡುಗಡೆಗೆ ತೀವ್ರ ವಿರೋಧ : ಹಲವು ಜಿಲ್ಲೆಗಳಲ್ಲಿ  ಕಲ್ಲು ತೂರಾಟ
0
SHARES
63
VIEWS
Share on FacebookShare on Twitter

Bengaluru : ಬಾಲಿವುಡ್‌(Bollywood) ನಟ ಶಾರುಖ್‌ ಖಾನ್‌(Shah Rukh Khan) ಅಭಿನಯದ ʼಪಠಾಣʼ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯದ ಕಲಬುರಗಿ, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಕಲ್ಲು (Pathan opposition in Karnataka)ತೂರಾಟ ಮತ್ತು ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಈಗಾಗಲೇ ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಚಿತ್ರ ಬಿಡುಗಡೆ ಮಾಡದಂತೆ ಭಾರೀ ಹಿಂಸಾಚಾರವೇ ನಡೆದಿದೆ. ಇದೀಗ ರಾಜ್ಯದಲ್ಲಿಯೂ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

Pathan opposition in Karnataka

ಕಲಬುರಗಿಯಲ್ಲಿ(Kalburgi)  ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಚಿತ್ರಮಂದಿರಗಳಿಗೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಶೆಟ್ಟಿ ಮಲ್ಟಿಪ್ಲೆಕ್ಸ್ ಎದುರು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿದರು.

ನಂತರ ಚಲನಚಿತ್ರವನ್ನು ನಿಲ್ಲಿಸಲು ಪ್ರಯತ್ನಿಸಿದ 30 ಜನರನ್ನು  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ʼಪಠಾಣ್‌ʼ(Pathan) ಸಿನಿಮಾ ಹಿಂದೂ ಧರ್ಮಕ್ಕೆ ಅವಮಾನ ಮಾಡುತ್ತಿದೆ.

ಕೇಸರಿ ಬಟ್ಟೆ ಧರಿಸಿ, ‘ಬೇಷರಂ ರಂಗ್’ (Besharam Rang)ಎಂಬ ಹಾಡಿನ ಮೂಲಕ ಬಾಲಿವುಡ್‌ನ ಜಿಹಾದಿಗಳು ನಮ್ಮ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ.

ನಾವು ಎಲ್ಲಾ ಚಿತ್ರಮಂದಿರಗಳಿಗೆ ಚಿತ್ರ ಪ್ರದರ್ಶಿಸದಂತೆ ಮನವಿ ಸಲ್ಲಿಸಿದೇವೆ. ಅವರು ಪ್ರದರ್ಶನ ಮಾಡಿದರೆ, ಅದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು  ಸದಸ್ಯರೊಬ್ಬರು ಹೇಳಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್ ನಲ್ಲಿ ,ನಾರಿ ಶಕ್ತಿ ; ಇತ್ತ ರಾಜ್ಯದಲ್ಲಿ ದಿನೇ ದಿನೇ ಮಹಿಳಾ ದೌರ್ಜನ್ಯ ಹೆಚ್ಚಳ : ಜೆಡಿಎಸ್‌ ಟೀಕೆ

ಅದೇ ರೀತಿ ಬೆಂಗಳೂರಿನಲ್ಲಿ(Bengaluru) ವೀರೇಶ್ ಚಿತ್ರಮಂದಿರದ ಮುಂದೆ ಬಲಪಂಥೀಯ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು. ಚಿತ್ರದ ಪೋಸ್ಟರ್‌ಗಳನ್ನು ಸುಟ್ಟು ‘ಪಠಾಣ್ ಬಹಿಷ್ಕಾರ’ ಘೋಷಣೆಗಳನ್ನು ಕೂಗಿದರು.

ಏತನ್ಮಧ್ಯೆ, ಬೆಳಗಾವಿಯಲ್ಲಿ, ಹಿಂಸಾಚಾರದಲ್ಲಿ ತೊಡಗಿದ್ದಕ್ಕಾಗಿ ಮತ್ತು ಸ್ಕ್ರೀನಿಂಗ್ ಅನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಸುಮಾರು 30 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Pathan opposition in Karnataka

ಬಲಪಂಥೀಯ ಗುಂಪಿನ ಸದಸ್ಯರು ಸ್ವರೂಪ ಮತ್ತು ನರ್ತಕಿ ಚಿತ್ರಮಂದಿರಗಳಿಗೆ ನುಗ್ಗಿ ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ.

ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಮೀಸಲು ಪೊಲೀಸರ (ಕೆಎಸ್‌ಆರ್‌ಪಿ)(KSRP) ತುಕಡಿಯನ್ನು ಚಿತ್ರಮಂದಿರಗಳ ಬಳಿ ನಿಯೋಜಿಸಿದೆ.

ಇನ್ನೊಂದೆಡೆ ಬೆಳಗಾವಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ)(BJP) ನಾಯಕ ಅಭಯ ಪಾಟೀಲ ಚಿತ್ರ ಬಿಡುಗಡೆಯನ್ನು ಖಂಡಿಸಿದ್ದಾರೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸಿನಿಮಾ ಪ್ರದರ್ಶನ ನಿಲ್ಲಿಸಬೇಕು.

ಇಂತಹ ಸಿನಿಮಾಗಳನ್ನು ಬಿಡುಗಡೆ ಮಾಡುವುದರಿಂದ ಸಮಾಜದ ವಾತಾವರಣ ಹಾಳಾಗುತ್ತದೆ. ಇಂದು ಪ್ರತಿಭಟನೆ (Pathan opposition in Karnataka) ಆರಂಭವಾಗಿದೆ. ಸಿನಿಮಾ ಬಿಡುಗಡೆಗೆ ಮಹಿಳೆಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ; ವಿತರಕರು ಪ್ರದರ್ಶನಗಳನ್ನು ನಿಲ್ಲಿಸಬೇಕು ಎಂದು  ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ, ಗೋಕುಲ್ ರಸ್ತೆ ಬಳಿಯ ಅರ್ಬನ್ ಓಯಸಿಸ್ ಮಾಲ್ ಸುತ್ತಲೂ ಬಲಪಂಥೀಯ ಸಂಘಟನೆಗಳು ಚಲನಚಿತ್ರ ಪ್ರದರ್ಶನವನ್ನು ಬಹಿಷ್ಕರಿಸುವಂತೆ ಕರೆ ನೀಡಿದ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಿತ್ರ   ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

Tags: Bollywoodmoviespathan movie

Related News

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023
RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!
ಮನರಂಜನೆ

RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!

March 14, 2023
22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ
Lifestyle

22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.