• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೆಟ್ರೋ ಪಿಲ್ಲರ್ ಕುಸಿತ : ಇದು 40% ಕಮಿಷನ್ ಸರ್ಕಾರದ ಫಲಿತಾಂಶ ಎಂದ ಡಿಕೆಶಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಮೆಟ್ರೋ ಪಿಲ್ಲರ್ ಕುಸಿತ : ಇದು 40% ಕಮಿಷನ್ ಸರ್ಕಾರದ ಫಲಿತಾಂಶ ಎಂದ ಡಿಕೆಶಿ
0
SHARES
19
VIEWS
Share on FacebookShare on Twitter

Bengaluru : ಬೆಂಗಳೂರಿನ ನಾಗವಾರದ ಮೆಟ್ರೋ ಪಿಲ್ಲರ್ ಕುಸಿತದಲ್ಲಿ(percentage commision Government) ಇಬ್ಬರು ಸಾವನ್ನಪ್ಪಿದ್ದು, ಈ ದುರ್ಘಟನೆ ಇದೀಗ ರಾಜಕೀಯ ತಿರುವನ್ನು ಪಡೆದುಕೊಂಡಿದೆ!

ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿರುವ ಭ್ರಷ್ಟಾಚಾರ ಮತ್ತು 40% ಕಮಿಷನ್‌ ದಂದೆಯಿಂದಲೇ ಈ ಘಟನೆ ಸಂಭವಿಸಿದೆ ಎಂದು ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌(DK Shiva kumar) ಆರೋಪಿಸಿದ್ದಾರೆ.

percentage commision Government

ಈ ದುರ್ಘಟನೆ ಸಂಭವಿಸಿದ ಕೂಡಲೇ ಘಟನೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಅವರು,

ನಾಗವಾರದ ಮೆಟ್ರೋ ಪಿಲ್ಲರ್‌ ಕುಸಿದು ಇಬ್ಬರನ್ನು ಬಲಿ ತೆಗೆದುಕೊಂಡಿದೆ ಮತ್ತು ಒಬ್ಬರಿಗೆ ಗಂಭೀರ ಗಾಯವಾಗಿದೆ.

ಇದು ಅತ್ಯಂತ ದುರದೃಷ್ಟಕರ. ಗುತ್ತಿಗೆದಾರನನ್ನು ಬಂಧಿಸಿ ಘಟನೆಯ ತನಿಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಈಗಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಅವರ ಹೇಳಿಕೆಯ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ದೂಷಿಸಿರುವ ಡಿ.ಕೆ ಶಿವಕುಮಾರ್‌, ಬಿಜೆಪಿ ಆಡಳಿತಾವಧಿಯಲ್ಲಿ ಸಂಭವಿಸಿದ ಅಪಘಾತಗಳ ಬಗ್ಗೆ ತನಿಖೆ ಆಗಬೇಕು.

ನಿರ್ಮಾಣ ಹಂತದಲ್ಲಿದ್ದ ನಾಗವಾರ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ ಮತ್ತು ಆಕೆಯ ಮಗ ಸಾವನ್ನಪ್ಪಿದ್ದಾರೆ ಮತ್ತು ಆಕೆಯ ಪತಿಗೆ ಗಂಭೀರ ಗಾಯವಾಗಿದೆ.

ಇದು 40% ಪರ್ಸೆಂಟ್ ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ! ಭ್ರಷ್ಟಾಚಾರವೇ ಈ ಭಾರೀ ಅಪಘಾತಕ್ಕೆ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಪಕ್ಷದವರು 40% ಪ್ರತಿಶತ ಕಮಿಷನ್ ತೆಗೆದುಕೊಳ್ಳುವಾಗ, ನೀವು ಯಾವ ಗುಣಮಟ್ಟವನ್ನು ನಿರೀಕ್ಷಿಸಲು ಸಾದ್ಯ?

ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಇಲ್ಲ ಎಂದು ಡಿ.ಕೆ ಶಿವಕುಮಾರ್ ರಾಜ್ಯ ಬಿಜೆಪಿ ಸರ್ಕಾರದ(percentage commision Government) ವಿರುದ್ಧ ಕಿಡಿಕಾರಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಣ ಘೋಷಿಸಿದ್ದು, ಬೆಂಗಳೂರು ನಗರದ ನಮ್ಮ ಮೆಟ್ರೋ ಕೂಡ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಹಣವನ್ನು ಘೋಷಿಸಿದೆ.

ಮಂಗಳವಾರ, ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ನಮ್ಮ ಮೆಟ್ರೋ ನಿಲ್ದಾಣದ ಪಿಲ್ಲರ್ ಕುಸಿದು ಮಹಿಳೆ ಮತ್ತು ಅವರ ಎರಡೂವರೆ ವರ್ಷ ವಯಸ್ಸಿನ ಮಗು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಅಂತ್ಯಕ್ರಿಯೆಯು ಇಂದು ದಾವಣಗೆರೆಯಲ್ಲಿ ನಡೆಯಲಿದೆ. ಮಹಿಳೆಯ ಪತಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Tags: Congressdkshivakumarpolitical

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.