ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆಯಾಗಿದ್ದು, ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವಂತಹುದ್ದು. ತಮಿಳುನಾಡು (Permission For Mekedatu Scheme) ಸರ್ಕಾರ
ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಕುಡಿಯುವ ನೀರಿನ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ
ತಮಿಳುನಾಡಿಗೇ ಹೋಗುತ್ತದೆ.
ಇದರಿಂದ ಅವರಿಗೇ ಹೆಚ್ಚಿನ ಅನುಕೂಲ. ಮೇಕೆದಾಟು ಯೋಜನೆ ಪೂರ್ಣಗೊಂಡರೆ ಬೆಂಗಳೂರು ಮತ್ತು ರಾಮನಗರ (Bengaluru and Ramanagar) ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ.
ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದೇನೆ ಎಂದು ದೆಹಲಿ ಭೇಟಿಯ ನಂತರ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ನೋಟಿಫಿಕೇಷನ್ (Gazette Notification) ಕೂಡ ಆಗಿದೆ. ಯೋಜನೆಯ ಜಾರಿಗೆ ಬೇರೆ ಯಾವ
ಅಡೆತಡೆ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರ ಸರ್ಕಾರವೇ ಕೊಡಬೇಕಿದ್ದು, ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಸರ್ಕಾರ ಪರಿಸರ
ಅನುಮತಿ ಕೊಟ್ಟ ಕೂಡಲೇ ಕೆಲಸ (Permission For Mekedatu Scheme) ಶುರು ಮಾಡಬಹುದು.
ಆದ್ದರಿಂದ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿ ಮೋದಿ (Modi) ಅವರ ಬಳಿ ಒತ್ತಾಯಿಸಿದ್ದೇನೆ. ಅದೇ ರೀತಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಅವರು ಬಜೆಟ್ ನಲ್ಲಿ ರೂ. 5,300 ಕೋಟಿ ಘೋಷಿಸಿದ್ದರು. ಇವರ ಘೋಷಣೆ ಆಧಾರದಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೂ ಕೂಡ ರೂ. 5,300 ಕೋಟಿ
ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ (BJP) ಸರ್ಕಾರದ ಕಮಿಟ್ ಮೆಂಟ್ ಆಗಿತ್ತು. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ
ಎಂದು ಪ್ರಧಾನಿ ಮೋದಿ ಅವರಲ್ಲಿ ಒತ್ತಾಯಿಸಿದ್ದೇನೆ ಎಂದಿದ್ದಾರೆ.
ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಮಾನವ ದಿನಗಳನ್ನು ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ
ಈ ಮನವಿಯನ್ನು ಮಾಡಿದ್ದೇವೆ. ಆದರೆ ಈ ನಮ್ಮ ಮನವಿ ಇನ್ನೂ ಈಡೇರಿಕೆಯಾಗಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಅವರ ಬಳಿ ಒತ್ತಾಯಿಸಿದ್ದೇನೆ ಎಂದಿದ್ದಾರೆ.
ಇದನ್ನು ಓದಿ: ಉಪ ರಾಷ್ಟ್ರಪತಿಯನ್ನೇ ಅಣುಕಿಸಿದ ಟಿಎಂಸಿ ಸಂಸದ, ಅದನ್ನ ವಿಡಿಯೋ ಮಾಡಿದ ರಾಹುಲ್ ಗಾಂಧಿ: ಛೀಮಾರಿ ಹಾಕಿದ ಉಪ ರಾಷ್ಟ್ರಪತಿ