PFI ಕಾರ್ಯಕರ್ತರಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ. ಕಾರಣ ಏನು ?

ಮಂಗಳೂರು ಡಿ 15 : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತರ ಮೇಲೆ ನಡೆದ ಲಾಠಿಚಾರ್ಜ್‌ ಖಂಡಿಸಿ ಇಂದು PFI ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದೆ.

ಘಟನೆಯ ವಿವರ : ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂವರು ಪಿಎಫ್‌ಐ ನಾಯಕರನ್ನು ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ ಮತ್ತು ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ವಿಚಾರಣೆಗಾಗಿ ಕರೆ ತಂದಿದ್ದೇವೆಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಾಗ ಬಹಳ ಸಮಯದ ನಂತರ ಒಬ್ಬರನ್ನು ಬಿಡುಗಡೆಗೊಳಿಸಿದ್ದರು. ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸಿದಾಗ ಪೊಲೀಸರು ಯಾವುದೇ ಸೂಚನೆ ನೀಡದೇ ರಾತ್ರಿ 9 ಗಂಟೆ ಸುಮಾರಿಗೆ ಏಕಾಏಕಿ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ರಾತೋರಾತ್ರಿ ಅಮಾಯಕರನ್ನು ಬಂಧಿಸಿದ್ದಲ್ಲದೇ, ಬಂಧಿತರ ಬಿಡುಗಡೆಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯವನ್ನು ಖಂಡಿಸಿ  ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಾಪ್ಯುಲರ್ ಫ್ರೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

Exit mobile version