ಹೈದರಾಬಾದ್, ಜ. 15: ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ನ ಮುಹೂರ್ತ ಅದ್ದೂರಿಯಾಗಿ ನೆರವೇರಿತು.
ಹೈದರಾಬಾದ್ನಲ್ಲಿ ನಡೆದ ಅದ್ಧೂರಿ ಮೂಹೂರ್ತ ಕಾರ್ಯಕ್ರಮಕ್ಕೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮತ್ತು ಟಾಲಿವುಡ್ನ ಖ್ಯಾತನಟ ಪ್ರಭಾಸ್ ಅಭಿನಯದ ಸಲಾರ್ ಸಿನಿಮಾದ ಫಸ್ಟ್ ಲುಕ್, ಪೋಸ್ಟರ್ ಈಗಾಗಲೇ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಚಿತ್ರಿದ ಚಿತ್ರೀಕರಣಕ್ಕೆ ಚಾಲನೆ ದೊರೆತಿದ್ದು ಜನವರಿ ಅಂತ್ಯಕ್ಕೆ ಚಿತ್ರೀಕರಣ ಆರಂಭಿಸಲು ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.