• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರಾಚೀನ ಶಿಲ್ಪಕಲಾಕೃತಿ-ಫಿರಂಗಿ ಗುಂಡು ಪತ್ತೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಪ್ರಾಚೀನ ಶಿಲ್ಪಕಲಾಕೃತಿ-ಫಿರಂಗಿ ಗುಂಡು ಪತ್ತೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 04: ಬೆಂಗಳೂರಿನ ಕಲಾಸಿಪಾಳ್ಯ ಬಸ್‌ ನಿಲ್ದಾಣ ಮತ್ತು ವಾಣಿ ವಿಲಾಸ್‌ ಬಳಿಯ ಖಾಲಿ ಜಾಗದಲ್ಲಿ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆಯಾಗಿವೆ.

ಬಹಳ ಹಿಂದಿನ ಕಾಲದ ಜಲಕಂಠೇಶ್ವರ ದೇಗುಲದ ಬಳಿಯ ಈ ಸ್ಥಳದಲ್ಲಿ ಹಿಂದೆ ಕಲ್ಯಾಣಿ ಇತ್ತು. ಕಾಲ ಕ್ರಮೇಣ ಅದು ಮುಚ್ಚಿ ಹೋಗಿತ್ತು ಎಂದು ಸ್ಥಳೀಯರುಹೇಳುತ್ತಾರೆ. ಈಗ ಈ ಜಾಗವನ್ನು ಸರ್ಕಾರಿ ಸ್ವಾಮ್ಯದ ವಾಣಿ ವಿಲಾಸ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನೀಡಲಾಗಿದೆ. ದಶಕದ ಕಾಲದಿಂದಲೂ ಕಾಲೇಜು ಒಡೆತನದಲ್ಲಿ ಈ ಸ್ಥಳ ಇದೆ. ಈಗ ಹೊಸ ಕಟ್ಟಡ ಕಟ್ಟಲು ಅಡಿಪಾಯ ತೆಗೆಯಲಾಗುತ್ತಿತ್ತು. ಈ ವೇಳೆ ಪ್ರಾಚೀನ ಕಾಲದ ವಿಗ್ರಹಗಳಿರುವ ಕಲ್ಲು ಮತ್ತು ಕಲ್ಯಾಣಿಯ ಕುರುಹುಗಳು ಪತ್ತೆಯಾಗಿವೆ.

ಸ್ಥಳದಲ್ಲಿ ಪ್ರಾಚೀನ ಕಟ್ಟಡ ಇರಬಹುದು ಎಂದು ಸ್ಥಳೀಯರು ಊಹಿಸುತ್ತಿದ್ದು, ಗುಂಡಿ ತೆಗೆಯುವ ಕಾರ್ಯವನ್ನು ಇದೀಗ  ನಿಲ್ಲಿಸಲಾಗಿದೆ. ‘ಪುರಾತತ್ವ ಶಾಸ್ತ್ರ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಾಚೀನ ಶಿಲ್ಪಕಲಾಕೃತಿಗಳ ಅಥವಾ ಕಟ್ಟಡದ ರಕ್ಷಣೆಗೆ ಮುಂದಾಗಬೇಕು’ ಎಂದು ಅರ್ಚಕರು ಒತ್ತಾಯಿಸಿದರು.

‘ಸುಮಾರು 700ರಿಂದ 800 ವರ್ಷ ಹಿಂದಿನ ಶಿಲೆಯಲ್ಲಿ ನಂದಿ, ಶಿವ ಮತ್ತು ಪಾರ್ವತಿ, ಭೃಂಗಿ ಮಹರ್ಷಿಯ ಕೆತ್ತನೆ ಇದೆ‌. ಜೊತೆಗೆ, ವ್ಯಕ್ತಿಯೊಬ್ಬ ಮೃದಂಗ ಬಾರಿಸುತ್ತಿರುವ ಚಿತ್ರವಿದೆ. ಜಲಕಂಠೇಶ್ವರ ದೇವಾಲಯ ನಿರ್ಮಾಣ ವೇಳೆ ಇದನ್ನು ಕೆತ್ತಿರುವ ಸಾಧ್ಯತೆ ಇದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕ ಆರ್. ಗೋಪಾಲ್ ಅವರು ಹೇಳಿದ್ದಾರೆ.

‘ಈ ಕಲಾಕೃತಿ ಅಪೂರ್ಣವಾಗಿದೆ ಎನಿಸುತ್ತದೆ. ಜೊತೆಗೆ ಸಿಕ್ಕಿರುವ ಫಿರಂಗಿ ಗುಂಡು ಟಿಪ್ಪು ಸುಲ್ತಾನ್ ಕಾಲಕ್ಕೆ ಸೇರಿದ್ದಾಗಿರಬಹುದು’ ಎಂದೂ ತಿಳಿಸಿದ್ದಾರೆ. ಈ ಹಿಂದೆ ಚಾಮರಾಜಪೇಟೆಯ ಚಲನಚಿತ್ರ ಕಲಾವಿದರ ಸಂಘದ ಕಟ್ಟಡ ನಿರ್ಮಾಣ ವೇಳೆಯೂ 23 ಫಿರಂಗಿ ಗುಂಡುಗಳು ದೊರಕಿದ್ದವು. ಅಲ್ಲದೆ, ಇದೇ ಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಮೆಟ್ರೊ ರೈಲು ಸುರಂಗ ಕಾಮಗಾರಿ ವೇಳೆ 3 ಫಿರಂಗಿಗಳು ಕೂಡ ದೊರಕಿದ್ದವು ಎಂಬುದನ್ನು ಈ ಸಂದರ್ಭ ಸ್ಮರಿಸಬಹುದಾಗಿದೆ.

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.