Bengaluru: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ (Guarantee Scheme) ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ‘ಪ್ರಗತಿ ಮೊಬೈಲ್ (Pragati Mobile Application)
ಅಪ್ಲಿಕೇಶನ್’ ಅನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದು, ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು
ಇದೇ ಸಮಯ ಸ್ಪಷ್ಟಪಡಿಸಿ ಇನ್ಮುಂದೆ ಗ್ಯಾರಂಟಿ ಯೋಜನೆಗಳಿಗೆ (Pragati Mobile Application) ಕಂಟಕ ಎಂದವರಿಗೆ ಟಕ್ಕರ್ ನೀಡಿದ್ದಾರೆ.
ಪ್ರಗತಿ ಮೊಬೈಲ್ ಅಪ್ಲಿಕೇಶನ್ (Pragati Mobile Application) ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡಲಿದೆ. ಅಧಿಕಾರಿಗಳು
ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡಲಿದ್ದು, ಬಡವರ ಪರವಾದ ಗ್ಯಾರಂಟಿ
ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ನಾವು ಯೋಚನೆಯನ್ನೂ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ನುಡಿದಿದ್ದಾರೆ
ಪ್ರಗತಿ ಮೊಬೈಲ್ ಅಪ್ಲಿಕೇಶನ್ ಹೇಗೆ ಕಾರ್ಯನಿರ್ವಹಿಸುತ್ತೆ?
ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಈ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ. ಡಿಎಂಎಫ್,(DMF ) ಕೆಕೆಆರ್ಡಿಬಿ
(KKRDB )ಸೇರಿ ಮುಂತಾದ ವಿಶೇಷ ಯೋಜನೆಗಳ ಅಡಿಯಲ್ಲಿ ಅನೇಕ ಸಲಕರಣೆಗಳು ಮತ್ತು ಇತರೆ ಸೌಲಭ್ಯಗಳನ್ನು ಜಿಲ್ಲಾಡಳಿತವು ಒದಗಿಸಿದೆ.
ಈ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಬಳಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ಷೇತ್ರಮಟ್ಟದ ವಿಶ್ಲೇಷಣೆಗಳ ಅಗತ್ಯವಿದ್ದು, ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ
ಕ್ಷೇತ್ರಮಟ್ಟದಲ್ಲಿ ಭೇಟಿ ನೀಡುವ ಮಾಹಿತಿಯನ್ನು ಸಂಗ್ರಹಿಸಲು ಅಪ್ಲಿಕೇಶನ್ (Application) ಸರಳ ವಿಧಾನವನ್ನು ಅನುಸರಿಸಲಾಗಿದೆ.
ಎಲ್ಲಾ ಇಲಾಖೆಗಳ ಪರಿಣಾಮಕಾರಿ ಮೇಲ್ವಿಚಾರಣೆ ಮತ್ತು ತಪಾಸಣೆಗಳನ್ನು ಸುವ್ಯವಸ್ಥಿತಗೊಳಿಸಲು, ತಂತ್ರಾಂಶ ಹಸ್ತಕ್ಷೇಪದ ಅಗತ್ಯವನ್ನು ಅನುಷ್ಠಾನ ಮಾಡುವುದೇ ಪ್ರಗತಿ ಮೊಬೈಲ್ ಅಪ್ಲಿಕೇಶನ್
ಆಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಇನ್ನು ಪ್ರಗತಿ ಮೊಬೈಲ್ ಅಪ್ಲಿಕೇಶನ್ ಚಾಲನೆ ನೀಡುವ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,
ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ
ತ್ರಿಲೋಕ್ ಚಂದ್ರ (Trilok Chandra) ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿ: ದೇವಾಲಯಗಳು ಪಿಕ್ನಿಕ್ ತಾಣವಲ್ಲ ; ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶಕ್ಕೆ ಹೈಕೋರ್ಟ್ ನಿರ್ಬಂಧ
- ಅಕ್ಷತಾ ಹೆಗ್ಡೆ