Hassan: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿರುವ ಹಾಸನ ಜೆಡಿಎಸ್ ಸಂಸದ, ಎನ್ಡಿಎ ಎಂಪಿ (Prajwal Revanna Sex Scandal Case)ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna)
ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ (Prajwal Revanna Sex Scandal Case) ಕಾಂಗ್ರೆಸ್ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಲಾಗಿದೆ.
ಇಂದು (ಏ.29) ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, ಹಾಸನದ ಸಂಸದ, ಎನ್ ಡಿಎ ಮೈತ್ರಿ (NDA Alliance) ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ
ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ
ಇರುತ್ತಾರೆ, ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಕೆಪಿಸಿಸಿ (KPCC) ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶ್ನಿಸಿದರು.
ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್ (Kul Deep Singh), ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್
ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.
ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ
ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ (Devegowda) ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ.
ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)
ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ (SIT) ರಚನೆಗೆ ಆದೇಶ ನೀಡಿದ್ದಾರೆ. ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ.
ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ.
ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಆದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ
ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು
ದಾಖಲಿಸಿ” ಎಂದು ಕರೆ ನೀಡಿದರು.
ಇದನ್ನು ಓದಿ: ಪ್ರಜ್ವಲ್ ರೇವಣ್ಣ ಕೇಸ್: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ- ಹೆಚ್.ಡಿ ರೇವಣ್ಣ