• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕೇಸರಿ ತೊಟ್ಟ ಸ್ವಾಮೀಜಿ ರೇಪ್ ಮಾಡಿದಾಗ ಕೆರಳದವರು, ಸಿನಿಮಾದವರ ಮೇಲೆ ಯಾಕೆ? : ಪ್ರಕಾಶ್ ರಾಜ್

Mohan Shetty by Mohan Shetty
in ಮನರಂಜನೆ
ಕೇಸರಿ ತೊಟ್ಟ ಸ್ವಾಮೀಜಿ ರೇಪ್ ಮಾಡಿದಾಗ ಕೆರಳದವರು, ಸಿನಿಮಾದವರ ಮೇಲೆ ಯಾಕೆ? : ಪ್ರಕಾಶ್ ರಾಜ್
0
SHARES
13
VIEWS
Share on FacebookShare on Twitter

Bengaluru : ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ನಟಿ ದೀಪಿಕಾ ಪಡುಕೋಣೆ ಅವರ ಫೋಟೋ ಇರುವ ಪೋಸ್ಟರ್ ಸುಟ್ಟುಹಾಕಿದ ಪ್ರತಿಭಟನಾಕಾರರ ವಿರುದ್ಧ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ (Prakash Slams Right Wing) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Controversy

ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಂಡಿರುವ ‘ಕೇಸರಿ’ ವಿವಾದ ಇದೀಗ ತಾರಕಕ್ಕೆ ಏರಿದ್ದು, ಬಾಲಿವುಡ್ ಚಿತ್ರರಂಗದಿಂದ ಮುಂಬರುವ ಸಿನಿಮಾ ‘ಪಠಾನ್’ ಚಿತ್ರದ ‘ಬೇಷರಂ ರಂಗ್’ ಹಾಡು ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಕೇಸರಿ ಬಟ್ಟೆಯನ್ನು ಧರಿಸಿ, ಮೈಚಳಿ ಬಿಟ್ಟು ಕುಣಿದಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ!

ನಟಿ ದೀಪಿಕಾ ಧರಿಸಿದ ಕೇಸರಿ ಬಣ್ಣದ ವಸ್ತ್ರದ ವಿರುದ್ಧ ತೀವ್ರ ಅಸಮಾಧಾನ, ಆಕ್ರೋಶ ಹುಟ್ಟಿಕೊಂಡಿರುವುದು ಮಾತ್ರವಲ್ಲದೇ, ರಾಜಕೀಯ ತಿರುವುಗಳನ್ನು ಪಡೆದುಕೊಂಡಿದೆ.

ಈ ವಿವಾದದ ಬಗ್ಗೆ ಕೆರಳಿದ ಕೆಲವರು, ನಟಿ ದೀಪಿಕಾ ಹಾಗೂ ಶಾರೂಖ್ ಅವರನ್ನು ‘ಮತಾಂಧರು’ ಎಂದು ಕರೆದು ಅವರ ಪೋಸ್ಟರ್ ಅನ್ನು ರಸ್ತೆಯಲ್ಲಿ ಸುಟ್ಟುಹಾಕಿದ್ದಾರೆ.

https://fb.watch/hsbdQcuBe0/ COVER STORY | ಪ್ಲಾಸ್ಟಿಕ್‌ ಬ್ಯಾನ್‌ ಅನ್ನೋ Joke ! Plastic ban has become joke in Karnataka.

ಇನ್ನು ಈ ಆಕ್ರೋಶದ ಬಗ್ಗೆ ಧ್ವನಿ ಎತ್ತಿದ ನಟ, ರಾಜಕಾರಣಿ ಪ್ರಕಾಶ್ ರಾಜ್ ಟ್ವೀಟ್ (Tweet) ಮಾಡಿದ್ದು, ಧಾರ್ಮಿಕ ವ್ಯಕ್ತಿಯೊಬ್ಬರು ಕೇಸರಿ ತೊಟ್ಟು ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ್ರೆ,

ಅವರ ವಿರುದ್ಧ ಯಾಕೆ ಆಕ್ರೋಶ, ಅಸಮಾಧಾನ ಕೇಳಿಬರಲ್ಲ? ಕೇವಲ ಒಂದು ಸಿನಿಮಾದವರ ವಿರುದ್ಧ ಮಾತ್ರ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಬೇಷರಮ್ ಮತಾಂಧರೇ… ಹಾಗಿದ್ರೆ ಕೇಸರಿ ತೊಟ್ಟ ಗಂಡಸರು ಬಲಾತ್ಕಾರ ಮಾಡಿದ್ರೂ ಪರವಾಗಿಲ್ಲ? ದ್ವೇಷದ ಭಾಷಣ ಮಾಡುವರು, ದಲ್ಲಾಳಿ ಎಂಎಲ್ ಎಗಳು,

ಕೇಸರಿ ತೊಟ್ಟ ಸ್ವಾಮೀಜಿ ಅಪ್ರಾಪ್ತರ ಮೇಲೆ ಅತ್ಯಾಚಾರ ಮಾಡ್ತಾರೆ, ಆದ್ರೆ ಸಿನಿಮಾದಲ್ಲಿ ಕೇಸರಿ ತೊಟ್ಟರೇ ಮಾತ್ರ ತಪ್ಪು? ಎಂದು ಹೇಳಿದ್ದಾರೆ.

Slams Right wing

ಬುಧವಾರ ಬಲಪಂಥೀಯ ಗುಂಪಿನ ಸದಸ್ಯರು ಇಂದೋರ್‌ನಲ್ಲಿ ‘ಪಠಾಣ್’ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿ, ನಟ ಶಾರುಖ್ ಖಾನ್ ಮತ್ತು ನಟಿ ದೀಪಿಕಾ ಪಡುಕೋಣೆ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಪಠಾಣ್ ಚಲನಚಿತ್ರವನ್ನು ಬಿಡುಗಡೆ ಮಾಡಬಾರದು ಬದಲು ಅದನ್ನು ಬಹಿಷ್ಕಾರ (Boycott) ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : https://vijayatimes.com/bsy-epic-reply/

ಈ ವಿವಾದದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಮಾತನಾಡಿ, ಆಗಾಗ್ಗೆ ಚಲನಚಿತ್ರಗಳು, ಟಿವಿ ಮತ್ತು ವೆಬ್ ಧಾರಾವಾಹಿಗಳು ಮತ್ತು ಜಾಹೀರಾತುಗಳನ್ನು ಗುರಿಯಾಗಿಟ್ಟುಕೊಂಡು ಹಿಂದೂ ಧರ್ಮವನ್ನು ಅವಮಾನಿಸಲಾಗುತ್ತಿದೆ.

‘ಕೊಳಕು ಮನಸ್ಥಿತಿ’ಯೊಂದಿಗೆ ಚಿತ್ರೀಕರಿಸಿದ ಆ ದೃಶ್ಯಗಳನ್ನು ಸರಿಪಡಿಸುವುದು ಒಳಿತು ಎಂದು ಚಿತ್ರದ ನಿರ್ಮಾಪಕರಿಗೆ ಒತ್ತಾಯಿಸಿದ್ದಾರೆ.

https://twitter.com/prakashraaj/status/1603266838288564225?s=20&t=cY3crC1i9L9GVxq_0nAQZA

ಇನ್ನು ಭಾರತೀಯ ಜನತಾ ಪಕ್ಷದ ಮಹಾರಾಷ್ಟ್ರದ ಶಾಸಕ ರಾಮ್ ಕದಮ್, ಈ ಹಾಡಿನಿಂದ ಬಹಳ ನೋವಾಗಿದೆ. ಈ ಹಾಡಿನಿಂದ ಮನನೊಂದಿರುವ ‘ಕೋಟ್ಯಂತರ ಜನರಿಗೆ’ ಚಿತ್ರದ ನಿರ್ಮಾಪಕರು ಸೂಕ್ತ ವಿವರಣೆ ನೀಡಬೇಕು ಎಂದು ಒತ್ತಾಯಿಸಿದರು.

ಮತ್ತೊಂದು ವೇದಿಕೆಯಲ್ಲಿ ಮಾತನಾಡಿದ ಶಾಸಕ ಮಿಶ್ರಾ ಮತ್ತು ರಾಮ್ ಕದಮ್ ಇಬ್ಬರೂ ಕೂಡ ನಟಿ ದೀಪಿಕಾ ಪಡುಕೋಣೆ ವಿರುದ್ಧ ವಾಗ್ದಾಳಿ ನಡೆಸಿದರು.

https://fb.watch/hrNNhIGXmH/ ಬ್ಯಾಂಕ್ ಲಾಕರ್ ಚಿನ್ನಮಾಯ! Bank locker fraud!

ಸದ್ಯ ವಿವಾದಗಳ ಮಧ್ಯೆ ಸಿಲುಕಿಕೊಂಡಿರುವ ಪಠಾಣ್ ಚಿತ್ರದ ಬೇಷರಂ ಹಾಡು, ನಟಿ ದೀಪಿಕಾ ಪಡುಕೋಣೆ, ಚಿತ್ರದ ನಿರ್ಮಾಪಕರಿಗೆ ಭಾರಿ ಗೊಂದಲಗಳು ಎದುರಾಗಿದೆ.

ಚಿತ್ರದಿಂದ ಹಾಡನ್ನು ತೆಗೆಯಬೇಕೋ? ಅಥವಾ ಈ ವಿವಾದ ಬಗ್ಗೆ ಸ್ಪಷ್ಟನೆ ನೀಡಬೇಕೋ? ಎಂಬುದು ಚಿತ್ರದ ನಿರ್ಮಾಪಕರಿಗೆ ತಿಳಿಯದಂತಾಗಿದೆ ಎಂದೇ ಹೇಳಬಹುದು.
Tags: controversypathan moviePrakash Rajsharukh khantweet

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.