• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರಾಣಾಯಾಮ ಮಾಡಿ ಶ್ವಾಸಕೋಶದ ಉಸಿರಾಡುವ ಶಕ್ತಿ ಬಲವಾಗುತ್ತೆ: ಡಾ. ಕೆ. ಸುಧಾಕರ್ ಸಲಹೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ರಾಜ್ಯದಲ್ಲಿ ಕೊರೊನಾ ಕಂಟಕ: ಟಫ್ ರೂಲ್ಸ್ ಜಾರಿ ಅವಶ್ಯಕ: ಸಚಿವ ಸುಧಾಕರ್
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 23: ಕೊರೊನಾ ದೃಢಪಟ್ಟರೆ ಆತಂಕಕ್ಕೊಳಗಾಗುವುದು ಬೇಡ. ಶೇ.90ರಷ್ಟು ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯವಿಲ್ಲ. ಸೋಂಕಿತರು ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು. ರೆಮ್‌ಡೆಸಿವಿ‌ ಅಗತ್ಯದಷ್ಟು ಸಪ್ಲೈ ಇದೆ. ಬಯೋಕಾನ್ ಅಧ್ಯಕ್ಷ ಮುಜುಂದಾರ್ ಷಾ ಅವರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ವಯಲ್ಸ್ ಕೊಡ್ತೀನೆ ಎಂದು ಬರವಸೆ ನೀಡಿದ್ದಾರೆ. ಜನರು ಆತಂಕ, ಭಯಪಡುವ ಆವಶ್ಯಕತೆ ಇಲ್ಲ ಎಂದು ಡಾ ಕೆ.ಸುಧಾಕರ್ ತಿಳಿಸಿದ್ದಾರೆ.

ಯಾರಿಗೋ ಒಬ್ಬ ವ್ಯಕ್ತಿಗೆ ಆಕ್ಸಿಜನ್ ಕಡಿಮೆ ಅಗ್ತಿದೆ. ಯುಕೆಯಲ್ಲಿ ಟೆಲಿ ಕಾಲರ್‌ ಮೂಲಕ ಔಷಧಿ ಪಡೆಯುತ್ತಿದ್ದಾರೆ. ಯಾರಿಗೆ ನಿಜವಾಗಿಯೂ ಅವಶ್ಯಕತೆ ಇದೆ ಅವ್ರು ಮಾತ್ರ ಆಸ್ಪತ್ರೆ ತೆರಳಿ, ದಯವಿಟ್ಟು ನಾನು ಮನವಿ ಮಾಡುತ್ತೇನೆ. ಕೆಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದೇವೆ. ಬೆಂಗಳೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಬೇಕಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ 500 ಬೆಡ್, 2500 ಬೆಡ್‌ಗಳಿರುವ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮಾಡುತ್ತೇವೆ. 800 ರಿಂದ 1000 ವೆಂಟಿಲೇಟರ್ ವ್ಯವಸ್ಥೆಯನ್ನು ಅತಿಶೀಘ್ರದಲ್ಲಿ ಮಾಡುತ್ತೇವೆ.

ಇಂತಹ ಸಾಂಕ್ರಾಮಿಕ ರೋಗ ಬಂದಾಗ ತೊಂದರೆ ಆಗೋದು ಸಹಜ. ಅಮೇರಿಕಾದಂತಹ ಬಹುದೊಡ್ಡ ದೇಶದಲ್ಲೇ ಆರ್ಥಿಕತೆ ಕುಸಿದಿದೆ. ಅದನ್ನು ಹೋಲಿಸಿದ್ರೆ ನಮ್ಮಲ್ಲಿ ಪರಿಸ್ಥಿತಿ ಬೇರೆಯೇ ಇದೆ. ದಿನನಿತ್ಯ ಪ್ರಾಣಾಯಾಮ ಮಾಡಿ, ಇದು ಶ್ವಾಸಕೋಶಕ್ಕೆ ಉತ್ತಮ. ರೋಗನಿರೋಧಕ ಶಕ್ತಿ ಹೆಚ್ಚಾದಾಗ CRIC ಯಾವ ರೋಗ ಹತ್ತಿರ ಬರುವುದಿಲ್ಲ. ವೀಕೆಂಡ್ ಕರ್ಪ್ಯೂಗಳನ್ನು ತಪ್ಪದೇ ಪಾಲಿಸಬೇಕು. ನೈಟ್ ಕರ್ಪ್ಯೂ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಬೇರೆ ದೇಶಗಳಲ್ಲಿ ಎರಡನೇ ಅಲೆ, ಮೂರನೇ ಅಲೆ, ನಾಲ್ಕನೇ ಅಲೆ ಬಂದಿದೆ. ಎಲ್ಲ ರಾಜ್ಯಗಳಲ್ಲೂ ಈ ರೂಪಾಂತರಗೊಂಡಿರುವ ವೈರಾಣು ಇದೆ. ವೈದ್ಯಕೀಯ ಜಗತ್ತಿಗೆ ಸವಾಲು ಆಗಿರೋ ವೈರಣು ಇದು. ಇಡೀ ದೇಶದಲ್ಲಿಯೇ ಆರೋಗ್ಯ ತುರ್ತು ಪರಿಸ್ಥಿತಿ ಇದೆ. ಇದು ಬರೀ ನಮ್ಮ ರಾಜ್ಯದಲ್ಲಿ ಮಾತ್ರಾನಾ? ಯಾವುದೇ ಸಂದರ್ಭದಲ್ಲಿ ಸರ್ಕಾರ ಹಿಂದೇಟು ಹಾಕುವುದಿಲ್ಲ ಜನರನ್ನು ಕೈ ಬಿಡುವುದಿಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.

ಜನರು ಪ್ರತಿದಿನ ಬೆಳಗ್ಗೆ 30 ನಿಮಿಷ ಲಘು ವ್ಯಾಯಾಮ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ಮುಂಜಾನೆ ಮತ್ತೆ 5-6 ಗಂಟೆಗೆ ಒಳ್ಳೆ ಗಾಳಿ ಇರುವಲ್ಲಿ ಕುಳಿತು ಪ್ರಾಣಾಯಾಮ ಮಾಡಿ. ಇದರಿಂದ ಶ್ವಾಸಕೋಶದ ಉಸಿರಾಡುವ ಶಕ್ತಿ ಬಲವಾಗುತ್ತೆ. ಬೇರೆಯವರಿಗೆ ಆಕ್ಸಿಜನ್ ಸಿಗುತ್ತಿಲ್ಲವೆಂಬ ಸುದ್ದಿ ನೋಡಿ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೊವಿಡ್ ಪಾಸಿಟಿವ್ ಬಂದ ತಕ್ಷಣ ಆಕ್ಸಿಜನ್ ಕೇಳ್ತಿದ್ದಾರೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.