Mysore: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ, ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha Against Congress) ಅವರು ಮತ್ತೆ ತೀವ್ರ ವಾಗ್ದಾಳಿ ನಡೆಸಿದದು, ಸಿಎಂ ಪುತ್ರ
ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ ಶಿವಕುಮಾರ್ (D K Shivakumar)
ಎದೆಗೆ ಗುಂಡು (Pratap Simha Against Congress) ಹೊಡೆಯುತ್ತಿದ್ದಾರೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಂಸದ ಪ್ರತಾಪ ಸಿಂಹ @prathapsimha, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ ಎಂದಿದ್ದು,
ಎಸ್.ಎಂ. ಕೃಷ್ಣ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಅಂತ ಹಳೇ ಮೈಸೂರು (Mysore) ಭಾಗದಲ್ಲಿ ಡಿಕೆ ಶಿವಕುಮಾರ್ ಪ್ರಚಾರ ಮಾಡಿದ್ದರು.
ಒಕ್ಕಲಿಗರ ಮನೆ ಮನೆಗೆ ಹೋಗಿ ವೋಟ್ ಕೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಚುನಾವಣೆ ನಾಯಕತ್ವ ವಹಿಸಿ ಚುನಾವಣೆಗೆ ಬಂಡವಾಳವನ್ನೂ ಹಾಕಿದ್ದರು.
ಎರಡೂವರೆ ವರ್ಷದ ಬಳಿಕ ಈ ಕಾರಣಕ್ಕಾಗಿಯೇ ಸಿಎಂ ಆಗುವ ಭರವಸೆ ಸಿಕ್ಕಿತ್ತು. ಆದರೆ ಸಿದ್ದರಾಮಯ್ಯ ಸಿಎಂ ಚೇರ್ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಸಿದ್ದರಾಮಯ್ಯ ಮೊದಲು ಎಂ.ಬಿ ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಅಂತ ಹೇಳಿಸಿದ್ದರು. ನಂತರ ಸತೀಶ್ ಜಾರಕಿಹೊಳಿ (Sathish Jarakiholi), ಜಮೀರ್ ಅಹ್ಮದ್, ಕೆ.ಎನ್ ರಾಜಣ್ಣ
ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಅಂತಾನೂ ಹೇಳಿದ್ದರು. ಈಗ ಮಗನ ಮೂಲಕ ಹೇಳಿಸುತ್ತಿದ್ದಾರೆ.
ಹಾಸನದಲ್ಲಿ (Hassan) ಇಂದು ಸಿಎಂ ಪುತ್ರ ಡಾ.ಯತೀಂದ್ರ (Dr. Yathindra) ನೀಡಿದ ಹೇಳಿಕೆಯನ್ನು ಗಮನಿಸಿದ್ದೇನೆ. ನಮ್ಮ ಸಮುದಾಯದವರು, ಮುಸಲ್ಮಾನರು ಸಹಕಾರ ನೀಡಿದ್ದರಿಂದ
ಸರ್ಕಾರ ಬಂತು ಅಂತ ಹೇಳಿದ್ದಾರೆ. ನಮಗೆ ಸ್ವಜಾತಿಯವರು, ಮುಸಲ್ಮಾನರು ಮಾತ್ರ ಮುಖ್ಯ ಅನ್ನುವ ಸಂದೇಶ ರವಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು, ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರು, ವರುಣದಲ್ಲಿ ಲಿಂಗಾಯತರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಕಾಂಗ್ರೆಸ್ (Congress) ಸರ್ಕಾರ ಬಂತಾ? 39 ಲಿಂಗಾಯತರು, ಹತ್ತಾರು ಒಕ್ಕಲಿಗರು
ಶಾಸಕರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಕಾರಣಕ್ಕೆ ದಲಿತರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲ ಜಾತಿ, ಜನಾಂಗದವರಿಗೆ
ದೋಖಾ ಆಗಿದೆ ಅಂತ ಅರ್ಥ ಮಾಡಿಕೊಳ್ಳಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್, ನಿದ್ದೆರಾಮಯ್ಯ: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ (Narendra Modi) ನಿದ್ದೆ ಮಾಡುವ ರೀತಿಯ ಫೋಟೋ ಟ್ವೀಟ್ ಮಾಡಿದ್ದು, ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ
ತೊಂದ್ರೆ ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ (BJP) ಕೂಡ ಟ್ವೀಟ್ ಮೂಲಕ ತಿರುಗೇಟು ನೀಡಿತ್ತು. ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ
ಸಿದ್ದರಾಮಯ್ಯಗೆ ಚೆನ್ನಾಗಿಯೇ ಸಿದ್ದಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿತ್ತು. ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿರುಗೇಟು
ನೀಡಿದ್ದಾರೆ. ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಕೌಂಟರ್ ಕೊಟ್ಟಿದ್ದಾರೆ.
ನಿದ್ದೆರಾಮಯ್ಯ ಅಂತಾನೇ ನಿಮಗೆ ಹೆಸರಿದೆ ಎಂದು ಅಶೋಕ್ ಕಿಡಿಕಾರಿದ್ದು, ನಿದ್ದೆರಾಮಯ್ಯ ಅಂತಾ ನಿಮಗೆ ಹೆಸರಿದೆಯೋ ಅಥವಾ ಮೋದಿಗೋ? ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್
ಅಂಬಾಸಿಡರ್ (Brand Ambassador). ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ಗೆ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
- ಭವ್ಯಶ್ರೀ ಆರ್ ಜೆ