Mysore: ಮೈಸೂರು-ಕೊಡಗು (Mysore-Kodagu) ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ತನ್ನ ವಿರುದ್ಧ ಆಕ್ಷೇಪಾರ್ಹ (Pratap Simha vs Pradeep Eshwar) ಪದಗಳನ್ನು ಬಳಕೆ ಮಾಡಿದ
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರಿಗೆ ತಿರುಗೇಟು ನೀಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.
ಪ್ರದೀಪ್ ಈಶ್ವರ್ ಅವರನ್ನು ಪ್ರತಾಪ್ ಸಿಂಹ (Pratap Simha) ಅವರು, ಮುಟ್ಟಾಳ, ಅಯೋಗ್ಯ ಎಂದೆಲ್ಲಾ ಹೇಳಿದ್ದರು. ಹಾಗಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಪ್ರದೀಪ್ ಈಶ್ವರ್ ಅವರನ್ನು
ಕೊಚ್ಚೆಗೆ ಹೋಲಿಕೆ ಮಾಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು (Pratap Simha vs Pradeep Eshwar) ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದಿದ್ದು, ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ, ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಪ್ರದೀಶ್
ಈಶ್ವರ್ ಹೇಳಿಕೆಗಳಿಗೆ ಮೈಸೂರಿನಲ್ಲಿ ಮಾತನಾಡಿದ ಅವರು ಪ್ರತಿಕ್ರಿಯಿಸಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ (Yathindra) ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು. ಲೋಕಸಭೆ ಚುನಾವಣೆಯಲ್ಲಿ
ಯತೀಂದ್ರ ಅವರ ಗೆಲುವು ನಿಶ್ಚಿತ ಎಂದು ಹೇಳುವ ಮೂಲಕ ಪ್ರದೀಪ್ ಈಶ್ವರ್ ಅವರು ಯತೀಂದ್ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದರು.
ಚುನಾವಣೆಯಲ್ಲಿ ಯತೀಂದ್ರ ಅವರು ಪ್ರತಿಸ್ಪರ್ಧಿಯಾದರೆ ಉತ್ತಮ ಎಂದರು. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ (Narendra Modi) ಎದುರು
ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ನನ್ನ ಪರ ಎರಡು ಪಕ್ಷದ (ಬಿಜೆಪಿ-ಜೆಡಿಎಸ್) ನಾಯಕರ ಆಶೀರ್ವಾದವಿದೆ ಎಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಿದ್ದರಾಮಯ್ಯ (Siddaramaiah) ಅವರು ಉದ್ಘಾಟನೆ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ, ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ
ಕಾಂಗ್ರೆಸ್ನ (Congress) ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದಿದ್ದಾರೆ.
ಇದನ್ನು ಓದಿ: ನೀವು ಯಾವ ಸೀಮೆಯ ರಾಮಭಕ್ತ..? – ಮೋದಿ ವಿರುದ್ದ ಸಿದ್ದು ವಾಗ್ದಾಳಿ
ಭವ್ಯಶ್ರೀ ಆರ್ ಜೆ