ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು – ಪ್ರತಾಪ್‌ ಸಿಂಹ

pratham simha

ಬೆಂಗಳೂರು ಜ 20 : ನಾರಾಯಣ ಗುರು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್‌ ಸಿಂಹ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿಯೇ  ಸಿದ್ದರಾಮಯ್ಯ ನಮಗೆ ಮಹನೀಯ ವ್ಯಕ್ತಿಗಳಿಗೆ ಹೇಗೆ ಗೌರವ ಕೊಡಬೇಕೆಂದು ಹೇಳುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ನಗರದಲ್ಲಿ ಸುದ್ಧಿಗಾರರೊಂದಿಗೆ ಮತನಾಡಿದ ಅವರು ರಾಜ್ಯದಲ್ಲಿ ಕ್ಯಾಂಟೀನ್ ಗಳಿಗೆ ಹೆಸರಿಡುವ ಸಂದರ್ಭದಲ್ಲಿ ಈ ಪುಣ್ಯ ನೆಲದ ಮಹಾಪುರುಷರ ಹೆಸರು ಅವರಿಗೆ ನೆನಪಾಗಲೇ ಇಲ್ಲ ಆಗ ಅವರಿಗೆ ಗಣ್ಯ ವ್ಯಕ್ತಿ ಎಂದು ನೆನಪಿಗೆ ಬಂದಿದ್ದು ಇಂದಿರಾಗಾಂಧಿ ಮಾತ್ರ ಎಂದು ಕಿಡಿಕಾರಿದರು.

ಅಧಿಕಾರದಲ್ಲಿ ಇರುವಾಗ ಅವರಿಗೆ ಈ ಮಹಾನೀಯರು ನೆನಪಾಗಿಲ್ಲ, ಆಗುವುದು ಇಲ್ಲ ಅಧಿಕಾರ ಹೋದ ಮೇಲೆ ಎಲ್ಲಾ ಮಹಾನೀಯರು ನೆನಪಾಗುತ್ತಾರೆ ಎಂದು ಸಂಸದ ಪ್ರತಾಪ್​ ಸಿಂಹ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಇದ್ದಾಗ ನೆನಪಾಗಲೇ ಇಲ್ಲ. ಈಗ ಮಹಾನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್​​ನಲ್ಲಿ ಅವಕಾಶ ಸಿಗದ ವಿಚಾರವಾಗಿ ಮಾತನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧ ಚಿತ್ರ ಮಾಡಿರುತ್ತಾರೋ. ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುತ್ತೆ. ಇಲ್ಲಿ ಯಾರ ಅವಮಾನದ ಪ್ರಶ್ನೆಯೇ ಇರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರಗಳ ಮಾರ್ಗಸೂಚಿಯನ್ನು ಓದಿ ಚೆನ್ನಾಗಿ ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


Exit mobile version