ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕೊಡಗು ಪ್ರವಾಸ: ತಲಕಾವೇರಿಯಲ್ಲಿ ಕುಟುಂಬದ ಜತೆಗೂಡಿ ವಿಶೇಷ ಪೂಜೆ

ಮಡಿಕೇರಿ, ಫೆ. 06: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಶನಿವಾರ ಆಗಮಿಸಿದರು.

ತಲಕಾವೇರಿಗೆ ಆಗಮಿಸಿದ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ರಾಷ್ಟ್ರಪತಿ ರಮಾನಾಥ್ ಅವರು ಪತ್ನಿ ಸವಿತಾ ಕೋವಿಂದ್ ಹಾಗೂ ಕುಟುಂಬ ಸದಸ್ಯರ ಜತೆಗೂಡಿದಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಡಿಸಿ ಚಾರುಲತಾ ಸೋಮಲ್, ಎಸ್ಪಿ ಕ್ಷಮಾ ಮಿಶ್ರ ಇತರರು ಹಾಜರಿದ್ದರು.

ಇದಕ್ಕೂ ಮುನ್ನ ರಾಷ್ಟ್ರಪತಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ರಾಷ್ಟ್ರಪತಿ ತಲಕಾವೇರಿ ದೇವಸ್ಥಾನಕ್ಕೆ ತೆರಳಿದ್ದು, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಪೂಜೆಯ ಬಳಿಕ ಮಡಿಕೇರಿಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

Exit mobile version