ಪಂಜಾಬ್ನಲ್ಲಿ ಉಂಟಾದ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತಿಪಡಿಸಿದ್ದಾರೆ. ಬುಧವಾರ ಪಂಜಾಬ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಉಂಟಾದ ಅಪಾಯದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯವರು ರಾಷ್ಟ್ರಪತಿಯವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಪಂಜಾಬ್ ಭೇಟಿಯ ಸಂದರ್ಭದಲ್ಲಿ ನಡೆದ ಭದ್ರತಾ ಲೋಪಗಳ ಬಗ್ಗೆ ವಿವರಿಸಿದ್ದಾರೆ.
“ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ನಿನ್ನೆ ಪಂಜಾಬ್ನಲ್ಲಿ ತಮ್ಮ ಬೆಂಗಾವಲು ಪಡೆಗೆ ಉಂಟಾದ ಭದ್ರತಾ ಲೋಪದ ಬಗ್ಗೆ ಪ್ರತ್ಯಕ್ಷ ವಿವರವನ್ನು ಪಡೆದರು. ರಾಷ್ಟ್ರಪತಿ ಗಂಭೀರ ಲೋಪದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಇಂದು ಬೆಳಿಗ್ಗೆ, ಪಂಜಾಬ್ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಸಂದರ್ಭದಲ್ಲಿ ಉಂಟಾದ ಲೋಪದೋಷಗಳನ್ನು ತನಿಖೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಆದರೆ ಬಿಜೆಪಿ ಈ ನಿರ್ಧಾರವನ್ನು ತಿರಸ್ಕರಿಸಿದ್ದು, ಮುಖ್ಯಮಂತ್ರಿ ಚರಣ್ಜಿತ್ ಚನ್ನಿ ಅವರೇ ಈ ಎಲ್ಲಾ ಷಡ್ಯಂತ್ರದ ರಿಂಗ್ ಮಾಸ್ಟರ್ ಎಂದು ಹಲವರು ದೂಷಿಸಿದ್ದಾರೆ.