Bengaluru: ಮೈಸೂರಿನಲ್ಲಿ ನ.೩ರಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಹೈಕಮಾಂಡ್ (PriyankKharge clarification about cm controversy) ಸೂಚಿಸಿದರೆ ನಾನೂ
ಸಿಎಂ ಆಗಲು ಸಿದ್ಧ ಎಂದು ನೀಡಿದ್ದಾರೆ ಎನ್ನಲಾಗಿರುವ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಎಂಬ ಹೇಳಿಕೆಯ ಬೆನ್ನಲ್ಲೇ ಪ್ರಿಯಾಂಕ್ ಹೇಳಿಕೆ
ಅಲ್ಲೋಲ ಕಲ್ಲೋಲ ಸೃಷ್ಟಿಗೆ ಕಾರಣವಾಗಿದ್ದು, ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.
ಟ್ವೀಟ್ನಲ್ಲಿ ಪ್ರಿಯಾಂಕ್ ಸ್ಪಷ್ಟನೆ
ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನು ನೀಡಿರುವ ಹೇಳಿಕೆಯು ತಪ್ಪಾಗಿ ಅರ್ಥೈಸಿ ವರದಿಯಾಗುತ್ತಿರುವುದು ಈಗಷ್ಟೇ ನನ್ನ ಗಮನಕ್ಕೆ ಬಂದಿರುವ ಕಾರಣ ಗೊಂದಲ ನಿವಾರಿಸುವ ಪ್ರಯತ್ನ
ಮಾಡುತ್ತಿದ್ದೇನೆ ಎಂದು ಅವರು ಎಕ್ಷ್ನಲ್ಲಿ ವಿವರಣೆ ನೀಡಿದ್ದು, (PriyankKharge clarification about cm controversy) ಅವರ ಸ್ಪಷ್ಟನೆ ಹೀಗಿದೆ.
ಪತ್ರಕರ್ತನ ಪ್ರಶ್ನೆ: ಸಿಎಂ ಹೇಳಿದ್ದು ಸ್ವಂತ ಹೇಳಿಕೆನಾ? ಏನು?
ನನ್ನ ಪ್ರತಿಕ್ರಿಯೆ : ಅದು ಸಿಎಂ ಅವರೇ ಹೇಳಿದಾರೆ. ನಾನೂ ಹೇಳಿದ್ದೀನಲ್ಲಾ ಸರ್, ದೆಹಲಿಯಲ್ಲಿ (Delhi) ನಾಲ್ಕು ಜನ ಕುತ್ಕೊಂಡು ಚರ್ಚೆ ಮಾಡಿದ್ದಾರೆ. ಆ ನಾಲ್ಕು ಜನ ಹೊರತುಪಡಿಸಿ ಬೇರೆ ಯಾರೇ
ಮಾತಾಡಿದ್ರೂ ಅದಕ್ಕೆ ಬೆಲೆಯಿಲ್ಲ. ಹೈಕಮಾಂಡ್ ಹೇಳಬೇಕಲ್ವಾ? ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ.
ಪತ್ರಕರ್ತ: ಯು ಆರ್ ಆಲ್ಸೋ ರೆಡಿ(Also Ready)?
ನನ್ನ ಪ್ರತಿಕ್ರಿಯೆ : ಯು ಆರ್ ಆಲ್ಸೋ ರೆಡಿ? ಇಫ್ ಯು ಆರ್ ರೆಡಿ, ಐ ಆಮ್ ಆಲ್ಸೋ ರೆಡಿ.
“ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ.”
ಇಲ್ಲಿ “ನೀವೇ” ಎಂಬುದನ್ನು ಆ ವರದಿಗಾರನ ಕುರಿತಾಗಿ ಹೇಳಿದ್ದೇ ಹೊರತು ಪ್ರಿಯಾಂಕ್ ಖರ್ಗೆಯ (Priyanka Kharge) ಕುರಿತಾಗಿ ಅಲ್ಲ. ಹೈಕಮಾಂಡ್ ಯಾರನ್ನೇ ಸಿಎಂ ಮಾಡುತ್ತೇವೆ ಎಂದರೂ
ನಮ್ಮ ಒಪ್ಪಿಗೆ ಇರುತ್ತದೆ, ಆ ವರದಿಗಾರನನ್ನೇ ಸಿಎಂ ಮಾಡುತ್ತೇವೆ ಎಂದು ಹೈಕಮಾಂಡ್ ಹೇಳಿದರೆ, ನಾನು ಅದಕ್ಕೂ ಎಸ್ ಅನ್ನುತ್ತೇನೆ ಎನ್ನುವುದಷ್ಟೇ ನನ್ನ ಮಾತಿನ ಅರ್ಥ
ಈ ಘಟನೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡುತ್ತಿರುವುದು, ಸುದ್ದಿಯನ್ನು ಪರಿಶೀಲಿಸದೇ ತಿರುಚಿ ವರದಿ ಮಾಡುತ್ತಿರುವುದು, ಘಟನೆಯನ್ನು ಘಟನೆ ಎಂದು ವರದಿ ಮಾಡುವುದರ ಬದಲು,
ನಾನು ಹೇಳಿಲ್ಲದ ಪದಗಳನ್ನೂ ಸೇರಿಸಿ “ನಾಳೆ ನಾನೇ ಸಿಎಂ” ಎಂಬ ಶೀರ್ಷಿಕೆಯಲ್ಲಾ ಸೇರಿಸಿ ವರದಿ ಮಾಡಲಾಗುತ್ತಿದೆ. ಇವೆಲ್ಲಾ ಕನ್ನಡ ಪತ್ರಿಕೋದ್ಯಮಕ್ಕೆ ಒಳ್ಳೆಯ ನಿದರ್ಶನವಲ್ಲಾ ಎಂಬುದು
ನನ್ನ ನಂಬಿಕೆಯಾಗಿದೆ ಎಂದು ತಿಳಿಸಲು ಬಯಸುತ್ತೇನೆ ಎಂದು ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.
ಯಾವುದೇ ಹುದ್ದೆಗಳನ್ನು ಜನರ ಅಪೇಕ್ಷೆ, ಆಶೀರ್ವಾದದಿಂದ ಪಡೆಯಬಹುದು ಹೊರತು ಲಾಭಿಯಿಂದ ಪಡೆಯಲಾಗದು, ನಮ್ಮ ರಾಜಕೀಯ ಬೆಳವಣಿಗೆ ಜನರ ನಂಬಿಕೆಯ ಮೇಲೆ ನಿಂತಿದೆ ಎಂದು
ನಂಬಿಕೊಂಡು ಕೆಲಸ ಮಾಡುತ್ತಿದ್ದೇನೆ.
ನನಗೆ ನೀಡಿದ ಇಲಾಖೆಗಳ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ, ಶ್ರದ್ದಾಪೂರ್ವಕವಾಗಿ ನಿರ್ವಹಿಸುವುದರ ಬಗ್ಗೆ ಗಮನಿಸುತ್ತಿದ್ದೇನೆಯೇ ಹೊರತು ಇನ್ಯಾವುದೇ ಹುದ್ದೆಗಳ ಮೇಲೆ ನನ್ನ ಗಮನವಿಲ್ಲ,
ಯೋಜನೆಗಳ ಮೂಲಕ ಜನರನ್ನು ತಲುಪುವುದು, ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನದ ಮೇಲೆ ಸದಾ ನನ್ನ ಗಮನವನ್ನು ಕೇಂದ್ರೀಕರಿಸಿರುತ್ತೇನೆ ಎಂದಿದ್ದಾರೆ.
ಇದನ್ನು ಓದಿ: ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭವ್ಯಶ್ರೀ ಆರ್.ಜೆ