Karnataka : 2023 ರ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಧನಗಳನ್ನು ನೀಡುತ್ತಿದೆ ಮತ್ತು ಈ ವರ್ಷ ಮೊದಲ ಬಾರಿಗೆ ಅರ್ಜಿಗಳನ್ನು ಕರೆಯಲಾಗಿದೆ.

ವಿವಿಧ ಕೋರ್ಸ್ಗಳಿಗೆ ದಾಖಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ನೀಡಲಾಗುವ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಆಗಸ್ಟ್ (August) 31, 2023. ಆಸಕ್ತಿಯುಳ್ಳವರು ಮತ್ತು ಅರ್ಹತಾ ಮಾನದಂಡಗಳನ್ನು ಹೊಂದಿರುವವರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ (Website) sw.kar.nic.in ಗೆ ಭೇಟಿ ನೀಡುವ ಮೂಲಕ ಹೆಚ್ಚುವರಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ (August) 31 ಕೊನೆಯ ದಿನವಾಗಿದ್ದು, ಈ ದಿನಾಂಕದೊಳಗೆ ಸಲ್ಲಿಸಲು ಹೆಚ್ಚು ಶಿಫಾರಸು ಮಾಡಲಾಗಿದೆ ಎಂದು ಇಲಾಖೆ ಪ್ರಕಟಿಸಿದೆ. ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಸಂಗತಿ. ಇದಲ್ಲದೆ, ಆನ್ಲೈನ್ (Online) ಅರ್ಜಿಗಳಿಗೆ ಮಾತ್ರ ಅನುಮತಿ ಇದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಆನ್ಲೈನ್ (Online) ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, , ಇಲಾಖಾ ವೆಬ್ಸೈಟ್ನಲ್ಲಿ ಕಾಲೇಜಿನ ಹೆಸರನ್ನು ಸೇರಿಸಲು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಹೋಗುವಂತೆ ಶಿಫಾರಸು ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
- ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ sw.kar.nic.in ಗೆ ಆನ್ಲೈನ್ನಲ್ಲಿ ಭೇಟಿ ನೀಡಿ.
- ಈ ವೆಬ್ಸೈಟ್ ನ ಮುಖಪುಟದಲ್ಲಿ ಮೆಟ್ರಿಕ್ ನಂತರದ ಪ್ರೋತ್ಸಾಹಧನ ಎಂಬ ಲಿಂಕ್ (Link) ಇರುತ್ತದೆ ಇದರ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಇಲ್ಲಿ ಮತ್ತೊಂದು ಪುಟ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಆನ್ಲೈನ್ (Online) ಅರ್ಜಿ ಎಂಬ ಲಿಂಕ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ಇಲ್ಲಿ ಕೇಳಲಾಗಿರುವ ಮುಖ್ಯವಾದ ದಾಖಲೆಗಳನ್ನು ಕೂಡಲೇ ಅಪ್ಲೋಡ್ ಮಾಡಿ.
- ನಂತರ ಇದರಲ್ಲಿ ಅಂಕಪಟ್ಟಿ,ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್, ಫೋಟೋಗಳನ್ನು ಅಪ್ ಲೋಡ್ ಮಾಡಿ.
- ಅರ್ಜಿ ಸಲ್ಲಿಸದ ಮೇಲೆ ಅದರ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಪ್ರಿಂಟ್ ತೆಗೆದುಕೊಳ್ಳಿ.

ಕೋರ್ಸ್ ಅನುಸಾರ ಪ್ರೋತ್ಸಾಹಧನದ ವಿವರಗಳು
ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ (Diploma) ವಿದ್ಯಾರ್ಥಿಗಳಿಗೆ – ರೂ. 20,000/-.
ದ್ವಿತೀಯ ಪಿಯುಸಿ (PUC) ವಿದ್ಯಾರ್ಥಿಗಳಿಗೆ – ರೂ. 20,000/-.
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – ರೂ. 30,000/-.
ಅಗ್ರಿಕಲ್ಚರ್, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – ರೂ.35,000/-.
ಪದವಿ ವಿದ್ಯಾರ್ಥಿಗಳಿಗೆ – ರೂ. 25,000 /-.
ರಶ್ಮಿತಾ ಅನೀಶ್