ಪ್ರೊ. ಕೆ. ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಬೆಂಗಳೂರು, ಫೆ. 04:  ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಸಾಹಿತಿ ಪ್ರಗತಿಪರ ಚಿಂತಕ ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ನಡೆದಿದೆ.

ವಕೀಲೆ ಮೀರಾ ರಾಘವೇಂದ್ರರಿಂದ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಭಗವಾನ್ ಹಿಂದೂ ವಿರೋಧಿ ಹೇಳಿಕೆ ಮೇಲೆ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಇಂದು 2ನೇ ACMM  ನ್ಯಾಯಾಲಯಕ್ಕೆ ಭಗವಾನ್ ಅವರು ಹಾಜರಾಗಿದ್ದರು. ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ಸಾಗುವ ವೇಳೆ ವಕೀಲೆ ಏಕಾಏಕಿ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ ಎಂಬುದು ತಿಳಿದು ಬಂದಿದೆ. ನ್ಯಾಯಾಲಯದ ಒಳಾಂಗಣದಲ್ಲೇ ಮುಖಕ್ಕೆ ಮಸಿ ಬಳಿದ ವಕೀಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲು ಹೋಗಿದ್ದಾರೆ. ವಕೀಲೆ ಮೀರಾ ರಾಘವೇಂದ್ರ ವಿರುದ್ಧ  ಭಗವಾನ್ ದೂರು ದಾಖಲಿಸಿದ್ದು,  ಭಗವಾನ್‌ಗೆ ನ್ಯಾಯಾಲಯ ಜಾಮೀನು ನೀಡಿತ್ತು. ಇದರಿಂದ ಆಕ್ರೋಶಗೊಂಡ ವಕೀಲೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ದಾಖಲಿಸುತ್ತಿದ್ದಾರೆ. ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ, ಕೆ. ಎಸ್ ಭಗವಾನ್ ತೆರಳಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಭಗವಾನ್ ಮೈಸೂರು‌ಕಡೆ ವಾಪಸ್ ನಡೆದಿದ್ದಾರೆ.

Exit mobile version