ಶಿಕ್ಷಣ ಸಚಿವರ ತವರಿನಲ್ಲಿ ಸೋರುತ್ತಿರುವ ಕೊಠಡಿಯೊಳಗೆ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ ವಿದ್ಯಾರ್ಥಿಗಳು !

Shimoga: ಸರ್ಕಾರಿ ಶಾಲೆ ಅಂದ್ರೆ ಇತ್ತೀಚೆಗೆ ಮೂಗು ಮುರಿಯುವವರೇ ಜಾಸ್ತಿ, ಇಂದಿಗೂ ಕನಿಷ್ಠ ಮೂಲಭೂತ ಸೌಲಭ್ಯ ಸಹ (problem in government school) ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಇಲ್ಲ.

ಆದರೆ ಬಡ ವಿದ್ಯಾರ್ಥಿಗಳು ವಿಧಿ ಇಲ್ಲದೇ ದುಬಾರಿ ಶಿಕ್ಷಣ ವ್ಯವಸ್ಥೆಯಿಂದಾಗಿ ಸರ್ಕಾರಿ ಶಾಲೆಯನ್ನೇ ಆಶ್ರಯಿಸುವಂತಾಗಿದೆ.




ಈಗಾಗಲೇ ಮಳೆಗಾಲ ಮಲೆನಾಡಿನಲ್ಲಿ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagar) ತಾಲೂಕಿನಲ್ಲಿ ಅದರಲ್ಲೂ ಮಳೆ ಎಡಬಿಡದೇ ಸುರಿಯುತ್ತದೆ.ಹೌದು.

ಇದು ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ಅವ್ಯವಸ್ಥೆ. ಆದರೆ ಸರ್ಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ.

ವಿದ್ಯಾರ್ಥಿಗಳು ಸೋರುತ್ತಿರುವ ಕೊಠಡಿಯೊಳಗೆ ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ. 8 ರಿಂದ 10 ನೇ ತರಗತಿಯವರೆಗೆ ಈ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ

ಇದನ್ನು ಓದಿ: ಭಾರತ ವಿರುದ್ಧದ ಮೊದಲನೇ ಟೆಸ್ಟ್ ಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ

ಮಾಡುತ್ತಿದ್ದಾರೆ.ಬಹುತೇಕವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ (problem in government school) ಮಾಡುತ್ತಿದ್ದಾರೆ

ವಿದ್ಯಾರ್ಥಿಗಳು ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ಪಾಠ ಕೇಳುತ್ತಿದ್ದರೇ, ಆತಂಕದಲ್ಲೇ ಶಿಕ್ಷಕರು ಬೋಧನೆ ಮಾಡುವಂತಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ

ಪೋಷಕರು ಹಾಗು ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಇನ್ನಾದರೂ ಈ ಬಗ್ಗೆ ಗಮನ ಹರಿಸುತ್ತಾರಾ ಎಂಬ ನಿರೀಕ್ಷೆಯಲ್ಲಿ ಗ್ರಾಮಸ್ಥರು ಇದ್ದಾರೆ.

ರಶ್ಮಿತಾ ಅನೀಶ್

Exit mobile version