ಬೆಂಗಳೂರಲ್ಲಿ ಬಿಸಿಯೂಟ ಕಾರ್ಮಿಕರಿಂದ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಪ್ರತಿಭಟನೆ

Bengaluru: ನಗರದಲ್ಲಿ ಇಂದು (ಅ.೩೧) ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರು 2022ರ ಡಿಸೆಂಬರ್​​(December) ನಿಂದ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಹಲವು ಬಾರಿ ಮನವಿ ಮಾಡಿ ಪ್ರತಿಭಟನೆ ನಡೆಸಿದರೂ ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಸೋಮವಾರ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ (Freedom Park) ಸೋಮವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (Center Of Indian Trade Unions) (ಸಿಐಟಿಯು) ಆಶ್ರಯದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಕೊಪ್ಪಳ ಮತ್ತು ಕೋಲಾರ ಜಿಲ್ಲೆ ಮಧ್ಯಾಹ್ನ ಬಿಸಿಯೂಟ ಕಾರ್ಮಿಕರು ಭಾಗಿಯಾಗಿದ್ದರಿಂದ, ಈ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಪೂರೈಕೆಯಲ್ಲಿ ತೊಂದರೆಯಾಗಿತ್ತು.

ಸುಮಾರು 1,19,000 ಮಧ್ಯಾಹ್ನ ಬಿಸಿಯೂಟ ಕಾರ್ಮಿಕರು 55,80,000 ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾವಾರು ಮುಷ್ಕರವನ್ನು ಆಯೋಜಿಸಿದ್ದು, ಕೊಪ್ಪಳ (Koppala) ಮತ್ತು ಕೋಲಾರದಿಂದ (Kolar) 450 ಕ್ಕೂ ಹೆಚ್ಚು ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಜಿಲ್ಲೆಗಳ ಶಾಲೆಗಳಲ್ಲಿ ಮಧ್ಯಾಹ್ನದ ಊಟವನ್ನು ನೀಡಲಾಗಿಲ್ಲ.

ಮುಂದಿನ ದಿನಗಳಲ್ಲಿ ಬಾಗಲಕೋಟೆಯ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದು, ಅಂದು ಜಿಲ್ಲೆಯ ಶಾಲೆಗಳಲ್ಲಿ ಊಟ ನೀಡುವುದಿಲ್ಲ ಎಂದು ಸಂಘಟನೆ ಮಂಗಳವಾರ ತಿಳಿಸಿದೆ. ದೀಪಾವಳಿವರೆಗೆ ಪ್ರತಿ ಜಿಲ್ಲೆಯಿಂದ ಕಾರ್ಮಿಕರು ಬಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮಿ (S.Varalakshmi) ಅವರು ಮಾತನಾಡಿದರು.

ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೇ, ಮಧ್ಯಾಹ್ನ ಬಿಸಿ ಊಟದ ಕಾರ್ಮಿಕರು ರಾಜ್ಯಾದ್ಯಂತ ಹಬ್ಬದ ನಂತರ ಕೆಲಸವನ್ನು ನಿಲ್ಲಿಸುತ್ತಾರೆ ಎಂದು ಎಚ್ಚರಿಕೆ ಕೊಟ್ಟರು. ನಮ್ಮ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಕಿರಿಯ ಅಧಿಕಾರಿಗಳನ್ನು ಕಳುಹಿಸುತ್ತದೆ. ಒಮ್ಮೆ ಬಂದು ಚರ್ಚೆ ಮಾಡಿ ಹೋದ ನಂತರ ಏನೂ ಕಾರ್ಯರೂಪಕ್ಕೆ ಬರುವುದಿಲ್ಲ.

ಯೋಜನೆ ಸ್ಥಾಪನೆಯಾಗುವವರೆಗೆ 45 ಮತ್ತು 46 ನೇ ಭಾರತೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಸರ್ಕಾರವು ಕಾರ್ಮಿಕರನ್ನು ಗುರುತಿಸಬೇಕು ಮತ್ತು ಶಾಲೆಗಳಲ್ಲಿ ಅಡುಗೆಯವರನ್ನು ‘ಡಿ’ ಕಾರ್ಮಿಕರಾಗಿ ನೇಮಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

60 ವರ್ಷ ತುಂಬಿದ ಹುದ್ದೆಯಿಂದ ವಜಾಗೊಂಡವರಿಗೆ 1 ಲಕ್ಷ ರೂಪಾಯಿ ಪಿಂಚಣಿ, ಕೆಲಸದ ಸ್ಥಳದಲ್ಲಿ ಮರಣ ಹೊಂದಿದಲ್ಲಿ 25 ಲಕ್ಷ ರೂಪಾಯಿ ಪರಿಹಾರ ಮತ್ತು ಹೊಸ ಬಜೆಟ್‌ನಲ್ಲಿ (Budget) ಪ್ರಸ್ತಾಪಿಸಲಾದ ವೇತನ ಹೆಚ್ಚಳವನ್ನು ಜನವರಿಯಿಂದ ಜಾರಿಗೊಳಿಸಬೇಕು ಎಂಬುವುದು ಕಾರ್ಮಿಕರ ಬೇಡಿಕೆಗಳಾಗಿವೆ.

ಭವ್ಯಶ್ರೀ ಆರ್. ಜೆ

Exit mobile version