ಬೆಂಗಳೂರು ಅ 30: ಕನ್ನಡ ಚಲನಚಿತ್ರರಂಗದ ದಿಗ್ಗಜ ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿದ್ದಾರೆ. ಕರ್ನಾಟಕ ಮತ್ತು ಕನ್ನಡ ಚಿತ್ರರಂಗದ ಪಾಲಿಗೆ ಇದು ಅತೀವ ನೋವಿನ ಕ್ಷಣವಾಗಿದೆ.
ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜ್ಕುಮಾರ್ ಇದುವರೆಗೆ ಅನೇಕ ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇವರು ಕನ್ನಡ ಚಿತ್ರರಂಗದ ಮೇರುನಟ ಡಾ.ರಾಜಕುಮಾರ್ ಅವರ ಕಿರಿಯ ಪುತ್ರನಾಗಿದ್ದಾರೆ.
ಪುನೀತ್ ರಾಜಕುಮಾರ್ ಅವರ ನೇತ್ರಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮಾಹಿತಿಗಳ ಪ್ರಕಾರ ಕಂಠೀರವ ಸ್ಟೇಡಿಯಂನಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ.