ನವದೆಹಲಿ, ಜು. 14: ರಾಜ್ಯಸಭೆಯಲ್ಲಿ ಆಡಳಿತಾರೂಢ ಬಿಜೆಪಿಯ ನಾಯಕರಾಗಿ ಪಿಯೂಷ್ ಗೋಯಲ್ ಅವರು ಆಯ್ಕೆಯಾಗಿದ್ದಾರೆ.
ಇದಕ್ಕೂ ಮೊದಲು ರಾಜ್ಯಸಭೆಯಲ್ಲಿ ಬಿಜೆಪಿಯ ನಾಯಕರನ್ನಾಗಿ ತಾವರ್ ಚಂದ್ ಗೆಹ್ಲೋಟ್, ಉಪ ನಾಯಕರನ್ನಾಗಿ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗಿತ್ತು. ಅದೇ ತಾವರ್ಚಂದ್ ಗೆಹ್ಲೋಟ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಬಿಜೆಪಿಯ ನೂತನ ನಾಯಕರಾಗಿ ನೇಮಕಗೊಂಡಿರುವ 57 ವರ್ಷದ ಪಿಯೂಷ್ ಗೋಯಲ್ ಅವರು ಪ್ರಸ್ತುತ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಕೇಂದ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದ್ದು, ಸಂಸದೀಯ ವ್ಯವಹಾರಗಳ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ.