ರಾಜ್ಯದಲ್ಲಿ ಮತ್ತೆರೆಡು ದಿನ ಮಳೆ ಸಾಧ್ಯತೆ!

ಬೆಂಗಳೂರು, ಡಿ. 17: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಜಾಸ್ತಿ ಇದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಇದೆ ಕಾರಣದಲ್ಲಿ ರಾಜ್ಯದಲ್ಲಿ ಮತ್ತೆ ಎರಡು ದಿನ ವರುಣ ಆರ್ಭಟಿಸಲಿದ್ದಾನೆ, ಅಲ್ಲದೇ ತುಂತುರು ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಸಂಜೆಯವರೆಗೂ ಮೋಡ ಕವಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.  

Exit mobile version