ಬಿಳಿಗಿರಿ ರಂಗನಾಥಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್

 ಚಾಮರಾಜನಗರ ಅ 7 : ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಗುರುವಾರ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿದ್ದರು. ಮೈಸೂರಿನಿಂದ ಹೆಲಿಕಾಪ್ಟರ್‌ ಮೂಲಕ ವಡಗೆರೆ ಹೆಲಿಪ್ಯಾಡ್‌ಗೆ ಆಗಮಿಸಿ, ರಸ್ತೆಯ ಮೂಲಕ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಿದರು. ಸುಮಾರು 15 ಕಿ ಮೀ ರಸ್ತೆಯಲ್ಲಿ ಪ್ರಯಾಣ ನಡೆಸಿದ ಆಗಮಿಸಿದ ರಾಮನಾಥ್ ಕೋವಿಂದ್ ಅವರನ್ನು ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಂಡರು.

ಆ ಬಳಿಕ ಬಿಳಿಗಿರಿರಂಗನನಾಥ ಸ್ವಾಮಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶೇಷ ಪೂಜೆ ಸಲ್ಲಿಸಿದರು. ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇವಾಲಯ ಸುತ್ತಲು ನಿಷೇದಾಜ್ಞೆ ಜಾರಿ ಮಾಡಿ ದೇವಾಲಯದಲ್ಲಿ ಅರ್ಚಕರಿಗೆ ಮಾತ್ರ ಪ್ರವೇಶ ಕಲ್ಪಿಸಿ ಸಾರ್ವಜನಿಕ ಪ್ರವೇಶಕ್ಕೂ ನಿಷೇಧಾಜ್ಞೆ ವಿಧಿಸಲಾಗಿತ್ತು.

ಆ ಬಳಿಕ 3.30ಕ್ಕೆ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದು  450 ಬೆಡ್ ಸಾಮರ್ಥ್ಯದ ಸರಕಾರಿ ಆಸ್ಪತ್ರೆ, ಕಟ್ಟಡದ ಉದ್ಘಾಟನೆ ನೆರವೇರಿಸಿದರು

Exit mobile version