ರಮೇಶ್ ಜಾರಕಿಹೊಳಿ ಪ್ರಕರಣ: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು

ಬೆಂಗಳೂರು, ಮಾ. 04: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಿಡುಗಡೆ ಮಾಡಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಸಲೀಲೆ ಸಿಡಿ ರಿಲೀಸ್ ಮಾಡಿದ್ದು ರಾಜಕೀಯ ಷಡ್ಯಂತ್ರ. ರಾಸಲೀಲೆ ಪ್ರಕರಣಕ್ಕೂ ದಿನೇಶ್ ಕಲ್ಲಳ್ಳಿಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಷಡ್ಯಂತ್ರದಿಂದ ಸಚಿವರ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ, ಕರ್ನಾಟಕ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ಎಂಬುವವರು ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೇ, ವಿಡಿಯೋವನ್ನ ಸಂಪೂರ್ಣ ಎಡಿಟ್ ಮಾಡಲಾಗಿದೆ. ಈ ದೃಶ್ಯ ನೋಡಿದರೇ ಸಮ್ಮತಿಯ ಸೆಕ್ಸ್ ಥರ ಕಾಣಿಸುತ್ತಿದೆ. ಒಂದೊಮ್ಮ ಅನ್ಯಾಯವಾಗಿದ್ದರೆ ಯುವತಿ ಏಕೆ ದೂರು ನೀಡಲಿಲ್ಲ. ವಿಡಿಯೋ ಎಡಿಟ್ ಮಾಡಿದ್ದು ಯಾರು ಎಂಬ ಬಗ್ಗೆ ವಿಚಾರಣೆ ನಡೆಯಬೇಕು. ಹೀಗಾಗಿ ದಿನೇಶ್ ಕಲ್ಲಳ್ಳಿ ಅವರನ್ನ ವಿಚಾರಣೆಗೊಳಪಡಿಸಬೇಕು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Exit mobile version