ಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು, ಮಾ. 03: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರಾಸಲೀಲೆ ಸಿಡಿ ಸ್ಪೋಟಗೊಂಡ ಬೆನ್ನಲ್ಲೇ ಸಾಹುಕಾರನ ತಲೆದಂಡವಾಗಿದ್ದು, ಮಹತ್ವದ ಬೆಳವಣಿಗೆಯಲ್ಲಿ ಹೈಕಮಾಂಡ್​ ಸೂಚನೆಗೆ ತಲೆಭಾಗಿದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಗೊಂಡ ಸಂಚಲನ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ರಮೇಶ್ ಜಾರಕಿಹೊಳಿ, ಪ್ರಕರಣ ಸ್ಪೋಟಗೊಂಡ ಮರುದಿನವೇ ಸಿಎಂಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷಕ್ಕೆ ಮುಜುಗರ ತಪ್ಪಿಸುವ ದೃಷ್ಟಿಯಿಂದ ರಾಜೀನಾಮೆ ಪಡೆಯಲಿದೆ ಎನ್ನಲಾಗುತ್ತಿದೆ. ಇನ್ನು ಸಿಡಿ ಪ್ರಕರಣದ ಕುರಿತು ತನಿಖೆ ನಂತರ ಸತ್ಯಾಸತ್ಯತೆ ಬಯಲಾಗಲಿದೆ ಎಂದು ಹೇಳಿದ್ದಾರೆ.

Exit mobile version