ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

ಸ್ಯಾಂಡಲ್ ವುಡ್ ನ ಮೋಹಕ ತಾರೆ ಎಂದು ಸಿನಿಪ್ರಿಯರ ಮನಗೆದ್ದಿರುವ ರಮ್ಯಾ ಅವರು ಹಲವು (Ramyas heart attack news) ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು.

ಆದರೆ ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡಿದ್ದು, ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್

ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮತ್ತೆ (Ramyas heart attack news) ಕಂಬ್ಯಾಕ್ ಮಾಡಿದ್ದಾರೆ.

ಇಂದು ಅಂದರೆ ಸೆಪ್ಟೆಂಬರ್ 6 ರಂದು ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ತಮಿಳು ಮಾಧ್ಯಮಗಳು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಆದರೆ ಇದೀಗ ಇದು ಸುಳ್ಳು ಸುದ್ದಿ ಅನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿದ್ದು, ರಮ್ಯಾ ಅವರು ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಈ ಕುರಿತು ರಮ್ಯಾ ಅವರು ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದ್ದು, ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡಿದ್ದರು. ರಾಜಕೀಯವನ್ನೂ ತೊರೆದ ಬಳಿಕ ಅವರು

ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮತ್ತೆ ಮರಳಿದ್ದು, ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.

ಆದರೆ ರಮ್ಯಾ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದ್ದು, . ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ (ದಿವ್ಯಾ ಸ್ಪಂದನಾ) ಫೋಟೋ ಹಂಚಿಕೊಂಡಿದ್ದು,

ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸದ್ಯಕ್ಕೆ ರಮ್ಯಾ ಅವರು ಯೂರೋಪ್ ಪ್ರವಾಸದಲ್ಲಿದ್ದು, ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

ರಮ್ಯಾ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಚಿತ್ರತಂಡದ ವಿರುದ್ಧ ಅವರು ಕೇಸ್ ಕೂಡ ದಾಖಲು ಮಾಡಿದ್ದರು.

ರಮ್ಯಾ ಅವರು ಈಗ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದು, ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ಪ್ರಗತಿಯಲ್ಲಿದೆ.

ಕೆಆರ್​ಜಿ ಸ್ಟುಡಿಯೋ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಹಾಗಾಗಿ ರಮ್ಯಾ ಅವರ ಅಭಿಮಾನಿಗಳಿಗೆ ನಿಟ್ಟುಸಿರು ಬಿಟ್ಟಂತಾಗಿದೆ .

ಇದನ್ನು ಓದಿ : CSI ಮಾಡರೇಟರ್ ಬಿಷಪ್ ಎ ಧರ್ಮರಾಜ್ ರಸಾಲಂ ಅವರ ಆಯ್ಕೆಯನ್ನು ರದ್ದು ಮಾಡಿದ ಮದ್ರಾಸ್ ಹೈಕೋರ್ಟ್

Exit mobile version