ರಾತ್ರಿ ಮಾತ್ರ ಸಂಚರಿಸಲು ರೂಪಾಂತರಿ ಕೊರೊನಾ ನಿಶಾಚಾರಿಯೇ?: ದಿನೇಶ್ ಗುಂಡೂರಾವ್

ಬೆಂಗಳೂರು, ಡಿ. 24: ರಾಜ್ಯದಲ್ಲಿ ರೂಪಾಂತರಿ ಕೊರೊನಾ ಕರಿನೆರಳು ಆವರಿಸಿರುವ ಹಿನ್ನೆಲೆಯಲ್ಲಿ, ನೈಟ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ಕ್ರಮವನ್ನು ಟೀಕಿಸಿರುವ ಶಾಸಕ ದಿನೇಶ್ ಗುಂಡೂರಾವ್, ರಾತ್ರಿ ವೇಳೆ ಮಾತ್ರ ಸಂಚರಿಸಲು ರೂಪಾಂತರಿ ಕೊರೊನಾ ನಿಶಾಚಾರಿಯೇ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕರ್ಫ್ಯೂ ವಿಚಾರದಲ್ಲಿ ಗೊಂದಲಕಾರಿ ನಿಲುವು ಪ್ರದರ್ಶಿಸುತ್ತಿದೆ. ಒಂದು ಕಡೆ 10 ದಿನಗಳ ರಾತ್ರಿ ಕರ್ಪ್ಯೂ ಹೇರಿರುವ ಸರ್ಕಾರ ಮತ್ತೊಂದೆಡೆ ಜ.1ರಿಂದ ಶಾಲಾ-ಕಾಲೇಜ್ ಪ್ರಾರಂಭಿಸುವ ನಿರ್ಧಾರ ಮಾಡಿದೆ. ಪದೇ ಪದೇ ನಿರ್ಧಾರ ಬದಲಿಸುವುದು ಅಸಮರ್ಥ ಆಡಳಿತದ ಸಂಕೇತ ಎಂದು ಟೀಕಿಸಿದ್ದಾರೆ.

Exit mobile version