• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ರಾಯರ ಮಠದಲ್ಲಿ ‘ರಂಗನಾಯಕ’ನಿಗೆ ಮುಹೂರ್ತ

Sharadhi by Sharadhi
in ಮನರಂಜನೆ
ರಾಯರ ಮಠದಲ್ಲಿ ‘ರಂಗನಾಯಕ’ನಿಗೆ ಮುಹೂರ್ತ
0
SHARES
0
VIEWS
Share on FacebookShare on Twitter

ಶೀರ್ಷಿಕೆ ಮಾತ್ರ ಬಿಡುಗಡೆಗೊಳಿಸಿ ವರ್ಷವಾಗುತ್ತಾ ಬಂದ ಚಿತ್ರ ‘ರಂಗನಾಯಕ’. ಚಿತ್ರದ ಮುಹೂರ್ತ ಸಮಾರಂಭವನ್ನು ಬುಲ್‍ಟೆಂಪಲ್ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನೆರವೇರಿಸಲಾಯಿತು.

‘ಮಠ’ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಹಾಗೂ ನವರಸನಾಯಕ ಜಗ್ಗೇಶ್ ಮರಳಿ ಒಂದಾಗಿ ಮಾಡುತ್ತಿರುವ ಚಿತ್ರವೇ ರಂಗನಾಯಕ. ಮುಹೂರ್ತ ದೃಶ್ಯದಲ್ಲಿ ಜಗ್ಗೇಶ್ ಅವರು ರಾಯರ ಮುಂದೆ ನಿಂತು ಪ್ರಾರ್ಥನೆ ಮಾಡುತ್ತಿರುವ ದೃಶ್ಯದ ಚಿತ್ರೀಕರಣ ನಡೆಸಲಾಯಿತು. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ಮಾಪಕ ದೇವೇಂದ್ರ ರೆಡ್ಡಿ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ವಿಖ್ಯಾತ್ ಫಿಲಂಸ್ ಬ್ಯಾನರ್ ಮೂಲಕ ಪುಷ್ಪಕವಿಮಾನ, ಇನ್‍ಸ್ಪೆಕ್ಟರ್ ವಿಕ್ರಂ ಚಿತ್ರಗಳ ನಂತರ ವಿಖ್ಯಾತ್ ನಿರ್ಮಿಸುತ್ತಿರುವ ಮೂರನೇ ಚಿತ್ರ ಇದಾಗಿದೆ. ಚಿತ್ರಕ್ಕೆ ಗುರುಪ್ರಸಾದ್ ನಿರ್ದೇಶನದ ಜೊತೆಗೆಕಥೆ, ಚಿತ್ರಕಥೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

ಬರೀ ಹೊಡಿಯೋದು, ಬಡಿಯೋದಷ್ಟೇ ಹೀರೋಯಿಸಂ ಅಲ್ಲ, ಪ್ರೇಕ್ಷಕರನ್ನು ನಗಿಸೋದು ಕೂಡ ಹೀರೋಯಿಸಂ ಎನ್ನುವ ಗುರುಪ್ರಸಾದ್ ತಮ್ಮ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ನಗಿಸುತ್ತಲೇ ಸಮಾಜದ ಅಂಕು ಡೊಂಕುಗಳನ್ನು, ಕಂದಾಚಾರಗಳನ್ನು ವಿಡಂಬನಾತ್ಮಕವಾಗಿ ಹೇಳುತ್ತಾರೆ. ಯಕ್ಷಗಾನ ಪ್ರಸಂಗದಲ್ಲಿ ಸಾಮಾನ್ಯವಾಗಿ ಬಳಸುವ ಪದ ರಂಗನಾಯಕ. ಈ ಚಿತ್ರದಲ್ಲಿ ರಂಗನಾಯಕ ಆಗಿರುವುದು ಜಗ್ಗೇಶ್ ಅಂತ ಎಲ್ಲರಿಗೂ ಗೊತ್ತು, ಆದರೆ ಈ ರಂಗನಾಯಕ ಆಡಿಸುವ ಸೂತ್ರದ ಗೊಂಬೆಗಳು ಯಾರಾಗಿರ್ತಾರೆ ಎನ್ನುವುದು ಮುಂದಿನ ದಿನಗಳಲ್ಲಷ್ಟೇ ಗೊತ್ತಾಗಬೇಕಿದೆ. ಜನವರಿ 15ರ ಸಂಕ್ರಾಂತಿಯ ದಿನದಿಂದ ರಂಗನಾಯಕನ ಚಿತ್ರೀಕರಣ ಪ್ರಾರಂಭಿಸುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

ಚಿತ್ರದಲ್ಲಿ ರಂಗಾಯಣ, ನೀನಾಸಂ, ಬಿಂಬ ಸೇರಿದಂತೆ ಹಲವಾರು ರಂಗಶಾಲೆಯ ನೂರಾರು ಕಲಾವಿದರುಗಳು ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನವಿದ್ದು, ಮನೋಹರ್ ಜೋಷಿ ಅವರ ಛಾಯಾಗ್ರಹಣವಿದೆ. ಚಿತ್ರದ ಕಥೆ, ಚಿತ್ರಕಥೆಯ ಜೊತೆ ಸಂಭಾಷಣೆ ಹಾಗೂ ಸಾಹಿತ್ಯ ಕೂಡ ಗುರುಪ್ರಸಾದ್ ಅವರೇ ರಚಿಸಿದ್ದಾರೆ. ವೀರಂ ಖ್ಯಾತಿಯ ಶಶಿಧರ್ ಹಾಗೂ ಉದ್ಯಮಿ ದೇವೇಂದ್ರ ರೆಡ್ಡಿ ಈ ಚಿತ್ರದ ಸಹನಿರ್ಮಾಪಕರು.

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.