ಶಿವಮೊಗ್ಗ ಅ 9 : ಜಿಲ್ಲಾ ಪ್ರವಾಸದಲ್ಲಿ ಇರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಶುಕ್ರವಾರ ರಾತ್ರಿ ನಡೆದ ಆರ್ಸಿಬಿ ಪಂದ್ಯವನ್ನು ತಮ್ಮ ಕಾರಿನಲ್ಲಿ ಕುಳಿತು ಕುತೂಹಲದಿಂದ ಪಂದ್ಯ ವೀಕ್ಷಣೆ ಮಾಡಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಒತ್ತಡದ ನಡುವೆಯೂ ರೋಚಕವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ತಮ್ಮ ವೀಕ್ಷಣೆ ಮಾಡಿದ ಫೋಟೋ ಇದೀಗ ವೈರಲ್ ಆಗುತ್ತಿದ್ದು, ಯಡಿಯೂರಪ್ಪ ಅವರ ಐಪಿಎಲ್ ಕ್ರೇಜ್ಗರ ಅಭಿಮಾನಿಗಳು ಫಿದಾ ಆಗಿದ್ದಾರೆ.
ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಅವರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಶ್ರಾಂತಿಗೆ ಮೊರೆ ಹೋಗದೇ ಪಕ್ಷದ ಸಂಘಟನೆಗಾಗಿ ಬಿಎಸ್ವೈ ಜಿಲ್ಲಾ ಪ್ರವಾಸಗಳನ್ನು ಮಾಡುತ್ತಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಡೆಲ್ಲಿ ನೀಡಿದ್ದ 165 ರನ್ಗಳ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಯ ಎಸೆತದಲ್ಲಿ ತಲುಪಿ ರೋಚಕ ಜಯ ಸಾಧಿಸಿತು. ಶ್ರೀಕಾರ ಭರತ್ ಕೊನೆಯ ಎಸೆತದಲ್ಲಿ ಅಗತ್ಯವಿದ್ದ 5 ರನ್ಗಳನ್ನು ಸಿಕ್ಸರ್ ಬಾರಿಸುವ ಮೂಲಕ ಗೆಲುವಿನದಡ ಸೇರಿಸಿದ್ದರು
ಚೊಚ್ಚಲ ಐಪಿಎಲ್ ಕಿರೀಟ ಎದುರು ನೋಡುತ್ತಿರುವ ಆರ್ಸಿಬಿ ತಂಡವೀಗ ಅಕ್ಟೋಬರ್ 11, ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ. ಈ ಹಿಂದೆ 2009, 2011 ಹಾಗೂ 2016ರಲ್ಲಿ ಮೂರು ಬಾರಿ ರನ್ನರ್-ಅಪ್ ಪ್ರಶಸ್ತಿ ಗೆದ್ದಿರುವುದು ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿಯ ಶ್ರೇಷ್ಠ ಸಾಧನೆಯಾಗಿದೆ.