ಬಟ್ಟೆ ಬಿಚ್ಚಿ ಮರ್ಯಾದೆ ತೆಗೆಯೋ ಬಿಜೆಪಿ ನಾಯಕರಿಗಾಗಿ 90 ಜೊತೆ ಬಟ್ಟೆ ರೆಡಿ: ಸಿದ್ದರಾಮಯ್ಯ

ಬೆಂಗಳೂರು, ಮಾ. 22: ಬಟ್ಟೆ ಖರೀದಿಸಿದ ವಿಚಾರವಾಗಿ ತಮ್ಮ ವಿರುದ್ಧ ವ್ಯಂಗ್ಯವಾಡಿದ್ದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ʻಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿಸಿದ್ದೇನೆ. ಬೇಕಿದ್ದರೆ ನಳೀನ್‌ ಕುಮಾರ್‌ ಕಟೀಲ್‌ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾʼ ಎಂದು ಕಟೀಲ್‌ಗೆ ಸಿದ್ದರಾಮಯ್ಯ ಕುಟುಕಿದ್ದಾರೆ.

ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದ ಸಿದ್ದರಾಮಯ್ಯ ಶೀಘ್ರವೇ ಕಾಂಗ್ರೆಸ್‌ ತೊರೆಯಲಿದ್ದು, ಅದಕ್ಕಾಗಿ 90 ಜೊತೆ ಹೊಸ ಬಟ್ಟೆ ಖರೀಸಿದ್ದಾರೆ ಎಂದು ಮಸ್ಕಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಕಟೀಲ್ ‌ ಟೀಕಿಸಿದ್ದರು.

Exit mobile version