ಮಂಡ್ಯ ಜಿಲ್ಲಾ ಪಂಚಾಯತ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಫೆ 17 ರ ಒಳಗಾಗಿ ಅರ್ಜಿ ಸಲ್ಲಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ
ಹುದ್ದೆಗಳ ವಿವರ
ತಾಂತ್ರಿಕ ಸಹಾಯಕರು (ಅರಣ್ಯ:) 03
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ಅರಣ್ಯ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಟ 40 ವರ್ಷಗಳು
ತಾಂತ್ರಿಕ ಸಹಾಯಕರು (ತೋಟಗಾರಿಕ) 01
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ತೋಟಗಾರಿಕೆ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿ ಕನಿಷ 21 ವರ್ಷಗಳು ಗರಿಷ್ಟ 40 ವರ್ಷಗಳು
ತಾಲೂಕು ಐ.ಇ.ಸಿ ಸಂಯೋಜಕರು 02
ಶೈಕ್ಷಣಿಕ ವಿದ್ಯಾರ್ಹತ – ಮಾಸ್ ಕಮ್ಯುನಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನಿಷ್ಠ 21 ವರ್ಷಗಳು ಗರಿಷ್ಟ 45 ವರ್ಷಗಳು
ಆಡಳಿತ ಸಹಾಯಕರು 07
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ವಯೋಮಿತಿ ಕನಿಷ್ಠ 21 ವರ್ಷಗಳು ಗರಿಷ 35 ವರ್ಷಗಳು
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು ಆಡಳಿತ ಸಹಾಯಕ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು