- ರಾಮನಗರಕ್ಕೆ ಮರು ನಾಮಕರಣ ಮಾಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರ (Red signal for renaming Ramanagara)
- ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರದ ನಕಾರ
- ಅಭಿವೃದ್ಧಿ ಕನಸು ಹೊಂದಿದ್ದ ಡಿಕೆ ಶಿವಕುಮಾರ್ ಬೇಸರ
Bengaluru: ರಾಮನಗರಕ್ಕೆ ಬೆಂಗಳೂರು ದಕ್ಷಿಣವೆಂದು (Bangalore South) ಮರು ನಾಮಕರಣ ಮಾಡಬೇಕು ಎಂದು ಕರ್ನಾಟಕ ಸರ್ಕಾರದ (Government of Karnataka) ನಿರ್ಧಾರಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ರಾಜ್ಯ ಸರ್ಕಾರ (State Govt) ಕಳುಹಿಸಿದ್ದ ಪ್ರಸ್ತಾವನೆಯನ್ನು ಪ್ರಶ್ನೆ ಮಾಡಿ ತಡೆಯೊಡ್ಡಿದೆ.
ಈ ಮೂಲಕ ರಾಮನಗರಕ್ಕೆ (Ramnagar) ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಬೇಕು ಎಂಬ ಡಿಕೆ ಶಿವಕುಮಾರ್ (DK Sivakumar) ಅವರ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಸರ್ಕಾರವು ಸಚಿವ ಸಂಪುಟದಲ್ಲಿ ರಾಮನಗರಕ್ಕೆ ಬೆಂಗಳೂರು ದಕ್ಷಿಣವೆಂದು ನಾಮಕರಣ ಮಾಡಲು ನಿರ್ಧಾರ ಮಾಡಿತ್ತು ಅಂತೆಯೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರದ (Central Govt) ಗೃಹ ಇಲಾಖೆಗೆ ಕಳುಹಿಸಲಾಗಿತ್ತು.
ಆದರೆ, ಗೃಹ ಇಲಾಖೆಯು (Home Department) ಈ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದು, ಸ್ಥಳೀಯರ ವಿರೋಧವಿದೆ ಎಂಬ ಕಾರಣವನ್ನು ಉಲ್ಲೇಖಿಸಿ ನಿರಾಕರಣೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಕೆಲ ತಿಂಗಳಿಂದ ರಾಮನಗರವನ್ನು ಬೆಂಗಳೂರಿಗೆ ಸೇರಿಸಲಾಗುತ್ತದೆ. ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಪ್ರತಿ ಭಾಷಣದಲ್ಲಿಯೂ ಹೇಳುತ್ತಿದ್ದರು. ಅಲ್ಲದೇ, ಮರು ನಾಮಕರಣದ ಬಳಿಕ ಬ್ರ್ಯಾಂಡ್ ವ್ಯಾಲ್ಯೂ (Brand value) ಹೆಚ್ಚಳವಾಗುತ್ತದೆ.
ಕಂಪನಿಗಳು, ಕೈಗಾರಿಕೆಗಳು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾಗುತ್ತವೆ. ಹೆಚ್ಚಿನ ಅಭಿವೃದ್ಧಿಯಾಗಿ ಆ ಕೀರ್ತಿಯು ಕಾಂಗ್ರೆಸ್ ಸರ್ಕಾರಕ್ಕೆ (Congress Govt) ಹಾಗೂ ತನಗೆ ಸಿಗುತ್ತದೆ ಎಂದು ಡಿಕೆ ಶಿವಕುಮಾರ್ ಎಂದು ಕನಸು ಕಂಡಿದ್ದರು. ಸದ್ಯ ಕೇಂದ್ರ ಸರ್ಕಾರ ಒಪ್ಪಿಗೆ ನೀಡದೆ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.
ಹೆಸರು ಬದಲಾವಣೆ ಮಾಡುವ ಪ್ರಸ್ತಾವನೆಗೆ ಕೇಂದ್ರ ಸ್ಪಂದಿಸಿಲ್ಲ ಎಂಬ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Byre Gowda) ಮಾತನಾಡಿದ್ದು, ಹೆಸರು ಬದಲಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಹೇಳಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಕನಕಪುರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಇದು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸಚಿವ ಸಂಪುಟ ಸಭೆಯಲ್ಲಿ (Cabinet meeting) ತೀರ್ಮಾನಿಸಿ, ಪ್ರಸ್ತಾವನೆಯನ್ನು ದೆಹಲಿಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಬಿಡದಿಯಲ್ಲಿ ಜಮೀನು ಮಾರಾಟಕ್ಕೆ ಆಯುಕ್ತರ ಅನುಮತಿ ಕಡ್ಡಾಯ : ಸ್ಮಾರ್ಟ್ ಸಿಟಿಗಾಗಿ 8 ಸಾವಿರ ಎಕರೆ ಸ್ವಾಧೀನಕ್ಕೆ ಸಜ್ಜು
ಕೇಂದ್ರ ಗೃಹ ಸಚಿವಾಲಯದಿಂದ ಇಂಟೆಲಿಜೆನ್ಸ್ನವರು ವರದಿ ಕಳುಹಿಸುವುದು ಬಾಕಿ ಇದೆ. ಆ ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ. ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ (Price of land) ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ನೀವು ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದು ಹೇಳಿದ್ದರು.
ಈ ಹಿಂದೆ ಕರ್ನಾಟಕ ಸರ್ಕಾರ ಕೆಲ ಜಿಲ್ಲೆಗಳ ಹೆಸರನ್ನು ಬದಲಾವಣೆ ಮಾಡುವಾಗ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆದಿತ್ತು. ಪ್ರಮುಖವಾಗಿ ಬಿಜಾಪುರ ಜಿಲ್ಲೆಯ ಹೆಸರನ್ನು ವಿಜಯಪುರ (Vijayapura) ಎಂದು, ಗುಲ್ಬರ್ಗಾ ಜಿಲ್ಲೆಯ ಹೆಸರನ್ನು ಕಲಬುರಗಿ (Kalaburagi) ಎಂದು ಮರು ನಾಮಕರಣ ಮಾಡಲಾಗಿತ್ತು.
ಆದರೆ ರಾಮನಗರ ಜಿಲ್ಲೆ ಹಾಗೆಯೇ ಉಳಿಯಲಿದೆ. ಈ ಹಿಂದೆಯೇ ರಾಮನಗರ ಜಿಲ್ಲೆಯ ಹೆಸರು ಬದಲಿಸುವುದಕ್ಕೆ ಎಚ್ಡಿ ಕುಮಾರಸ್ವಾಮಿ (HD Kumaraswamy) ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಈಗ ರಾಜ್ಯದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, (Red signal for renaming Ramanagara) ಇದರ ಹಿಂದೆ ಎಚ್ಡಿ ಕುಮಾರಸ್ವಾಮಿ ಅವರು ಕೆಲಸ ಮಾಡಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರ್ತಿದೆ.