Bengaluru: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ (Release Drought Relief – DKS) ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ,
ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (D K Shivakumar) ಒತ್ತಾಯಿಸಿದ್ದಾರೆ.
ಬಿಜೆಪಿ – ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನ ಸ್ವೀಕಾರ
ಮಾಡಿದ ಕೇಂದ್ರ ಸರ್ಕಾರದ ಅಧ್ಯಯನಕ್ಕೆ ಅಧಿಕಾರಿಗಳನ್ನ ಕಳಿಸಿದ್ರು. 26 ಸಂಸದರು, 19 ಜೆಡಿಎಸ್ (JDS) ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದು ಬೆಂಗಳೂರಿನಲ್ಲಿ
(Bengaluru) ಶುಕ್ರವಾರ ಮಾತನಾಡಿದ ಅವರು ಹೇಳಿದರು.
ಇದಕ್ಕೆ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಬರದ ಹಿನ್ನಲೆಯಲ್ಲಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ,
ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು (Release Drought Relief – DKS) ಎಂದು ಒತ್ತಾಯಿಸಿದರು.
ಬರಗಾಲ ಸಂದರ್ಭದಲ್ಲಿ ನರೇಗಾ ಮಾನವ ದಿನಗಳನ್ನು ಹೆಚ್ಚಿಸಬೇಕು ಎಂದು ಹೇಳಿದ್ದೇವೆ. 100 ಮಾನವ ದಿನಗಳು ಇದ್ದಿದ್ದು 150 ಮಾಡಬೇಕು ಎಂದು ಪತ್ರ ಬರೆಯಲಾಗಿದೆ. ಆದರೆ ಎರಡು ಮೂರು
ತಿಂಗಳು ಆದರೂ ಪ್ರಾರಂಭಿಸಿಲ್ಲ.ಕೂಡಲೇ ಬಿಜೆಪಿ (BJP) ಸಂಸದರು ಹಾಗೂ ಅವರ ನೆಂಟಸ್ಥಿಕೆಯಲ್ಲಿರುವ ದಳದವರು ಹೋಗಲಿ. ಹೋಗಿ ಮನವಿ ಮಾಡಲಿ, ರಾಜಕಾರಣ ಮಾಡಲಿ ನಾವು ಬೇಡ ಎನ್ನಲ್ಲ
ಎಂದು ತಿರುಗೇಟು ನೀಡಿದರು.
ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದು, ಕುಡಿಯುವ ನೀರಿನ, ಮೇವು, ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ ಎಂದು ಇದೇ ಸಂದರ್ಭದಲ್ಲಿ
ತಿಳಿಸಿದರು. ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ಹಣ ಕೊಡಲಿಲ್ಲ ಎಂದರೂ, ನಮ್ಮ ಸರ್ಕಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಕೇಂದ್ರ ಸರ್ಕಾರ ನಮ್ಮಿಂದ ಬರ ಪರಿಹಾರ ಕೊಡಲು .
ಆಗಲ್ಲ ಎಂದು ಹೇಳಬೇಕು ಎಂದು ಸವಾಲು ಹಾಕಿದರು.
ಇದನ್ನು ಓದಿ: ಸಿಬಿಎಸ್ಇ ಇಂದ 10th, 12th ಪರೀಕ್ಷೆ ವೇಳಾಪಟ್ಟಿ, ಶೀಘ್ರದಲ್ಲೇ ಪ್ರಕಟಣೆ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ
- ಭವ್ಯಶ್ರೀ ಆರ್.ಜೆ