- ಅಬಕಾರಿ ನೀತಿ ಪ್ರಕರಣದಲ್ಲಿ (Relief for Kejriwal in excise policy case) ಕೇಜ್ರಿವಾಲ್ಗೆ ರಿಲೀಫ್
- ನಾನು ಭ್ರಷ್ಟನಲ್ಲ, ಪ್ರಾಮಾಣಿಕ ಎಂದು ಬಿಕ್ಕಿ ಬಿಕ್ಕಿ ಅತ್ತ ಕೇಜ್ರಿವಾಲ್
- ಸುಳ್ಳು ಪ್ರಕರಣ ದಾಖಲಿಸಿದ ಬಿಜೆಪಿಗೆ ಮುಖಭಂಗ
New delhi: ದೆಹಲಿ ಅಬಕಾರಿ (ಎಕ್ಸೈಸ್) ನೀತಿ ಪ್ರಕರಣದಲ್ಲಿ (Relief for Kejriwal in excise policy case) ಮಹತ್ವದ ತಿರುವು ಕಂಡಿದೆ.
ಬಹುಚರ್ಚಿತ ಪ್ರಕರಣದಲ್ಲಿ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) , ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಸೇರಿದಂತೆ ಒಟ್ಟು 23 ಮಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.
ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ (Jitendra Singh) ಅವರು ನೀಡಿದ ಆದೇಶದಲ್ಲಿ, ಆರೋಪಿಗಳನ್ನು ತಪ್ಪಿತಸ್ಥರನ್ನಾಗಿ ತೋರಿಸಲು ಸಮರ್ಪಕ ಮತ್ತು ವಸ್ತುನಿಷ್ಠ ಸಾಕ್ಷ್ಯಗಳ ಕೊರತೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ.

ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಊಹಾಪೋಹಗಳ ಆಧಾರದ ಮೇಲೆ ಮುಂದುವರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿದೆ. ಕಳೆದ ಎರಡು ವರ್ಷಗಳಿಂದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದ್ದ ಪ್ರಕರಣಕ್ಕೆ ಈ ತೀರ್ಪು ಹೊಸ ದಿಕ್ಕು ನೀಡಿದೆ.
ಈ ಪ್ರಕರಣ 2021-22ರ ದೆಹಲಿ ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದ (Relief for Kejriwal in excise policy case) ಭ್ರಷ್ಟಾಚಾರದ ಆರೋಪದ ಮೇರೆಗೆ ಆರಂಭವಾಗಿತ್ತು.
ಖಾಸಗಿ ಮದ್ಯ ವ್ಯಾಪಾರಿಗಳಿಗೆ ಲಾಭವಾಗುವಂತೆ ನೀತಿ ರೂಪಿಸಲಾಗಿದೆ ಮತ್ತು ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಸಿಬಿಐ (CBI) ಹಾಗೂ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಸುಮಾರು ಎರಡು ವರ್ಷ ಜೈಲಿನಲ್ಲಿ ಕಳೆದರೆ, ಅರವಿಂದ್ ಕೇಜ್ರಿವಾಲ್ ಆರು ತಿಂಗಳು ಬಂಧನದಲ್ಲಿದ್ದರು.
ತನಿಖೆ, ಬಂಧನ ಮತ್ತು ನ್ಯಾಯಾಲಯದ ವಿಚಾರಣೆಗಳ ನಡುವೆ ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಆಮ್ ಆದ್ಮಿ (Aam Aadmi) ಪಕ್ಷದ ರಾಜಕೀಯ ಭವಿಷ್ಯಕ್ಕೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.
ನ್ಯಾಯಾಲಯದ ತೀರ್ಪಿನ ಬಳಿಕ ಅರವಿಂದ್ ಕೇಜ್ರಿವಾಲ್ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
ತಮ್ಮ ವಿರುದ್ಧದ ಆರೋಪಗಳು ಆಧಾರರಹಿತವಾಗಿದ್ದವು ಎಂದು ಹೇಳಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ವಾಗ್ದಾಳಿ ನಡೆಸಿದರು.
ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸುವಂತೆ ಸವಾಲು ಹಾಕಿದ ಕೇಜ್ರಿವಾಲ್, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದರು. ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಇನ್ನೊಂದೆಡೆ, ಬಿಜೆಪಿ ನಾಯಕರು ತನಿಖೆ ಕಾನೂನು ಪ್ರಕ್ರಿಯೆಯ ಭಾಗವಾಗಿದ್ದು, ನ್ಯಾಯಾಂಗದ ಮುಂದಿನ ಹಂತದಲ್ಲಿ ಸತ್ಯ ಹೊರಬರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ತೀರ್ಪು ಕೇವಲ ವ್ಯಕ್ತಿಗಳ ಖುಲಾಸೆಯಷ್ಟೇ ಅಲ್ಲ, ತನಿಖಾ ಸಂಸ್ಥೆಗಳ ಕಾರ್ಯಪದ್ಧತಿ ಕುರಿತ ಚರ್ಚೆಗೂ ಕಾರಣವಾಗಿದೆ. ಆರೋಪಗಳು ಗಂಭೀರವಾಗಿದ್ದರೂ, ಅವುಗಳನ್ನು ಸಾಬೀತುಪಡಿಸಲು ಸಮರ್ಪಕ ದಾಖಲೆಗಳ ಕೊರತೆ ಇದ್ದುದಾಗಿ ನ್ಯಾಯಾಲಯ ಹೇಳಿರುವುದು ಗಮನಾರ್ಹ.
ಸಾರ್ವಜನಿಕ ಅಭಿಪ್ರಾಯ ಮತ್ತು ಮಾಧ್ಯಮ ವರದಿಗಳಿಗಿಂತ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಾಕ್ಷ್ಯಗಳ ಮಹತ್ವವೇ ಪ್ರಮುಖ ಎಂಬ ಸಂದೇಶವನ್ನು ಈ ತೀರ್ಪು ನೀಡಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೈ-ಪ್ರೊಫೈಲ್ ಪ್ರಕರಣಗಳಲ್ಲಿ ತನಿಖಾ ಗುಣಮಟ್ಟ, ಸಾಕ್ಷ್ಯ ಸಂಗ್ರಹಣೆಯ ಪಾರದರ್ಶಕತೆ ಹಾಗೂ ನ್ಯಾಯಾಂಗ ಪರಿಶೀಲನೆಯ ಪಾತ್ರ ಮತ್ತೆ ಚರ್ಚೆಗೆ ಬಂದಿವೆ.
ಇದರ ನಡುವೆ, ಸಿಬಿಐ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಘೋಷಿಸಿದೆ.