ಕವಿರತ್ನ ಕಾಳಿದಾಸ, ಅನುಪಮ ಸಿನಿಮಾಗಳ ನಿರ್ದೇಶಕ ರೇಣುಕಾ ಶರ್ಮಾ ನಿಧನ

ಬೆಂಗಳೂರು, ಮೇ. 06: ಕನ್ನಡ ಚಿತ್ರರಂಗದ ಸಿನಿಮಾ ನಿರ್ದೇಶಕ ರೇಣುಕಾ ಶರ್ಮ ನಿಧನರಾದರು.

ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅವರ ಅತ್ಯಂತ ಯಶಸ್ವಿ ಚಿತ್ರವಾಗಿತ್ತು. ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಭರ್ಜರಿ ಗಂಡು, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.

ರೇಣುಕಾ ಶರ್ಮ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಚಿತ್ರ ನಿರ್ದೇಶಕ ರೇಣುಕಾಶರ್ಮ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಕೋವಿಡ್ ನಿಂದಾಗಿ ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಜೀವ ತೆತ್ತಿರುವುದು ಅತ್ಯಂತ ನೋವಿನ ಸಂಗತಿ. ಅವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

Exit mobile version