- ಆಗುಂಬೆ ಘಾಟ್ನಲ್ಲಿ ಸುರಕ್ಷಿತ (road development western ghats) ಸಂಚಾರಕ್ಕಾಗಿ ಸುರಂಗ ನಿರ್ಮಾಣ ಸಾಧ್ಯತೆ
- ಆಗುಂಬೆ ಘಾಟ್ ಮೇಲ್ದರ್ಜೆ ಯೋಜನೆಗೆ ಆಡಳಿತಾತ್ಮಕ ಮೊದಲ ಹೆಜ್ಜೆ
- ಪರಿಸರ ಸಂವೇದನಾಶೀಲತೆಗೆ ಗೌರವ ನೀಡಿ ಡಿಪಿಆರ್ ಸಿದ್ಧಪಡಿಸಲು ಕೇಂದ್ರದ ಮುಂದಾಳತ್ವ
ಮಲೆನಾಡು ಮತ್ತು ಕರಾವಳಿ ಭಾಗಗಳನ್ನು ಸಂಪರ್ಕಿಸುವ ಅತ್ಯಂತ ಪ್ರಮುಖ (road development western ghats) ಮಾರ್ಗಗಳಲ್ಲಿ ಒಂದಾದ ಆಗುಂಬೆ ಘಾಟ್ (Agumbe Ghat) ರಸ್ತೆಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ.
ಈ ಘಾಟ್ ರಸ್ತೆಯನ್ನು ಮೇಲ್ದರ್ಜೆಗೇರಿಸುವುದು ಹಾಗೂ ಸುರಂಗ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸುವ ಉದ್ದೇಶದಿಂದ ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರ ಟೆಂಡರ್ ಆಹ್ವಾನಿಸಿದೆ. ಈ ಕಾರ್ಯಕ್ಕಾಗಿ ಸುಮಾರು 2.33 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ದಶಕಗಳಿಂದಲೂ ಪ್ರಸ್ತಾಪದ ಹಂತದಲ್ಲೇ ಉಳಿದಿದ್ದ ಯೋಜನೆಗೆ (road development western ghats) ಇದೀಗ ಪ್ರಾಯೋಗಿಕ ಚಾಲನೆ ಸಿಕ್ಕಿರುವುದು ಸ್ಥಳೀಯರಲ್ಲೂ ಸಂತಸ ಮೂಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಅವರು, ಕೇಂದ್ರ ಸರ್ಕಾರ ಆಗುಂಬೆ ಘಾಟ್ ಸುರಂಗ ಮಾರ್ಗದ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿರುವುದು ಮಲೆನಾಡು ಮತ್ತು ಕರಾವಳಿ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸಲಿದೆ ಎಂದು ತಿಳಿಸಿದ್ದಾರೆ.
ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಸುರಕ್ಷಿತ ಹಾಗೂ ವೇಗವಾದ ಸಂಚಾರಕ್ಕೆ ಅವಕಾಶ ಸಿಗಲಿದೆ. ಜೊತೆಗೆ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತು ತುರ್ತು ಸೇವೆಗಳ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆಗುಂಬೆ ಘಾಟ್ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169ಎ (ಕಿ.ಮೀ 30.75 ರಿಂದ 51.60ರವರೆಗೆ) ವಿಸ್ತರಣೆಗೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ಅಧ್ಯಯನ, ಸಮೀಕ್ಷೆ, ಭೂ ವಿನ್ಯಾಸ ಮತ್ತು ಡಿಪಿಆರ್ (DPR) ತಯಾರಿಕೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.
ರಸ್ತೆ ಎರಡು ಲೇನ್ಗಳಾಗಿ ಅಭಿವೃದ್ಧಿಪಡಿಸುವ ಜೊತೆಗೆ ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗ ಕಲ್ಪಿಸುವ ಉದ್ದೇಶವೂ ಇದೆ. ಈ ಪ್ರಕ್ರಿಯೆಯಲ್ಲಿ ಸುರಂಗ ನಿರ್ಮಾಣ ಸಾಧ್ಯತೆಯನ್ನು ಪರಿಶೀಲಿಸಲು ವಿಶೇಷ ತಾಂತ್ರಿಕ ತಜ್ಞರು ಮತ್ತು ಭೂ ಭೌತಶಾಸ್ತ್ರಜ್ಞರನ್ನು ಒಳಗೊಳ್ಳಲಾಗುತ್ತದೆ.
ಆಗುಂಬೆ ಘಾಟ್ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವುದರಿಂದ, ಪರಿಸರ ಸಂವೇದನಾಶೀಲತೆಯನ್ನು ಕಾಪಾಡುತ್ತಲೇ ವೈಜ್ಞಾನಿಕ ವಿಧಾನದಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಮಳೆಯ ಪ್ರಮಾಣ ಹೆಚ್ಚು ಇರುವ ಈ ಪ್ರದೇಶದಲ್ಲಿ ಭೂ ಕುಸಿತ ಮತ್ತು ಅಪಘಾತಗಳ ಪ್ರಮಾಣ ಹೆಚ್ಚಿರುವುದರಿಂದ ಸುರಕ್ಷಿತ ಸಂಚಾರ ವ್ಯವಸ್ಥೆ ರೂಪಿಸುವುದು ಅತ್ಯಗತ್ಯವಾಗಿದೆ. ಸುರಂಗ ಮಾರ್ಗದ ಆಯ್ಕೆ ಸಾಧ್ಯವಾದರೆ, ಅಪಾಯಕಾರಿ ತಿರುವುಗಳನ್ನು ತಪ್ಪಿಸಿ ಸುರಕ್ಷಿತ ಪ್ರಯಾಣಕ್ಕೆ ದಾರಿ ತೆರೆದೀತು ಎಂಬ ನಿರೀಕ್ಷೆ ಇದೆ.
ಡಿಪಿಆರ್ ಪ್ರಕ್ರಿಯೆ ಆರಂಭಗೊಂಡಿರುವುದು ಈ ಯೋಜನೆಯನ್ನು ಶೀಘ್ರಗತಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ.
ಮುಂದಿನ ಹಂತಗಳಲ್ಲಿ ಭೂ ಸ್ವಾಧೀನ, ಪರಿಸರ ಅನುಮತಿ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಸಮನ್ವಯದಿಂದ ಪೂರ್ಣಗೊಳಿಸುವುದು ಅಗತ್ಯವಾಗಿದೆ.
ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಮಲೆನಾಡು-ಕರಾವಳಿ ಭಾಗದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದ್ದು, ಜನರ ಬಹುಕಾಲದ ಬೇಡಿಕೆ ಈಡೇರುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರವೂ ಕೇಂದ್ರದೊಂದಿಗೆ ಸಮನ್ವಯ ಸಾಧಿಸಿ ಯೋಜನೆಗೆ ಪೂರ್ಣ ಸಹಕಾರ ನೀಡಬೇಕೆಂಬುದು ಜನರ ಆಶಯವಾಗಿದೆ.
ಇದನ್ನು ಓದಿ : https://vijayatimes.com/union-home-ministry-new-rules/