• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮತಾಂತರ ಹೆಚ್ಚುತ್ತಿರುವ ಹಿನ್ನಲೆ ನಾಳೆ ಆರ್‌ಎಸ್‌ಎಸ್‌ ಬೈಠಕ್

Preetham Kumar P by Preetham Kumar P
in Vijaya Time
ಮತಾಂತರ ಹೆಚ್ಚುತ್ತಿರುವ ಹಿನ್ನಲೆ ನಾಳೆ ಆರ್‌ಎಸ್‌ಎಸ್‌ ಬೈಠಕ್
0
SHARES
0
VIEWS
Share on FacebookShare on Twitter

ಬೆಂಗಳೂರು ಅ 20 :   ರಾಜ್ಯದಲ್ಲಿ ದಿನೇದಿನೇ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಕಳೆದೊಂದು ವಾರದಿಂದ ದಾಖಲೆಯ ಕ್ರೈಸ್ತ ಮತಾಂತರ ಸಂಬಂಧಿತ ಘಟನೆಗಳು ರಾಜ್ಯದಲ್ಲಿ ವರದಿಯಾಗಿದೆ ಎಂದು ಖುದ್ದು ಬಿಜೆಪಿ ಸಚಿವರೇ ಆರೋಪಿಸಿದ್ದಾರೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ಆರ್‌ಎಸ್‌ಎಸ್ ಆಕ್ಟೋಬರ್ 21ಕ್ಕೆ ಮಹತ್ವದ ಸಭೆಯೊಂದನ್ನು ಕರೆದಿದೆ. ಈ ಸಭೆಯಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ತುರ್ತು ಸಮನ್ವಯ ಬೈಠಕ್ ನಡೆಸಲಿದೆ.

ಎಷ್ಟೋ ವರ್ಷಗಳಿಂದ ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇತ್ತೀಚೆಗಂತೂ ದಾಖಲೆ ಪ್ರಮಾಣದಲ್ಲಿ ರಾಜ್ಯದ ಮೂಲೆ ಮೂಲೆಯಲ್ಲೂ ಕ್ರೈಸ್ತ ಮತಾಂತರ ಸಾಕಷ್ಟೂ ಸದ್ದು ಮಾಡುತ್ತಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಬೇಕು ಎಂದು ಹಿಂದೂಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ.

ಇದೇ ನೆಪವನ್ನಾಗಿಟ್ಟುಕೊಂಡು ಭಜರಂಗದಳ ಕಾರ್ಯಕರ್ತರು ಹುಬ್ಬಳ್ಳಿಯ ಬೈರಿದೇವರಕೊಪ್ಪದ ಎಜೆ ಚರ್ಚ್ನಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾಳಿ ನಡೆಸಿದ್ದರು. ಪಾದ್ರಿ ಪ್ರಾರ್ಥನೆ ಮಾಡಿಸುತ್ತಿದ್ದರು ಎಂದು ಚರ್ಚ್‌ಗೆ ನುಗ್ಗಿ ಗಲಾಟೆ ಮಾಡಿದ್ದರು. ಹೀಗೆ ಮಾಡಿದ ಭಜರಂಗದಳ ಕಾರ್ಯಕರ್ತರ ವಿರುದ್ಧ ಅಲ್ಪಸಂಖ್ಯಾತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ರು.

ಮಂಗಳೂರಿನ ಓಲ್ಡ್‌ ಕೆಂಟ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮತಾಂತರಕ್ಕೆ ಪುಸ್ತಕ ಹಂಚಿದ್ದಾಗಿ ಹಿಂದೂ ಸಂಘಟನೆ ಆರೋಪ ಮಾಡಿತ್ತು. ಅಲ್ಲದೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದರು. ಇದರ ಪೂರ್ವ-ಪರ ಯೋಚಿಸದೆ ಪೊಲೀಸರು ಕೂಡ ಹಿಂದೂಪರ ಸಂಘಟನೆಗಳು ಥಳಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಕುಕ್ಕುಂದೂರುವಿನಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಗತಿ ಪ್ರಾರ್ಥನಾಲಯಕ್ಕೆ ನುಗ್ಗಿ ಹಿಂದೂಪರ ಸಂಘಟನೆಗಳ ಮುಖಂಡರು ಗಲಾಟೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಮನೆಯಲ್ಲಿ ಮತಾಂತರ ನಡೆಯುತ್ತಿದ್ದರು ಎಂದು ನೆಪವೇಳಿ ಅಲ್ಲಿಯೂ ಹಿಂದೂ ಸಂಘಟನೆಗಳು ದಾಳಿ ಮಾಡಿ ಪುಂಡಾಟ ಮೆರೆದಿದ್ದರು.

ಇನ್ನು, ಮಡಿಕೇರಿಯಲ್ಲಿ ಕ್ರೈಸ್ತ ಮತದ ಪರವಾಗಿ ಮಹಿಳೆಯೊಬ್ಬರು ಕರಪತ್ರ ಹಂಚಿದ್ದರು. ಕ್ರೈಸ್ತ ಧರ್ಮ, ಏಸುವನ್ನು ಮಾತ್ರ ನಂಬಿ ಅಂತ ಪ್ರಚಾರ ಮಾಡ್ತಿದ್ದರು ಎಂದು ಆರೋಪಿಸಿದ್ದರು. ದಿಡ್ಡಳ್ಳಿ ಆದಿವಾಸಿಗಳ ಪರ ಹೋರಾಟ ನಡೆಸುತ್ತಿದ್ದವರ ವಿರುದ್ಧವೂ ಹಿಂದೂ ಸಂಘಟನೆಗಳು ಹೀಗೆ ಸುಳ್ಳು ಆರೋಪ ಎಸಗಿದ್ದರು.

ಹೀಗೆ ಆರ್‌ಎಸ್‌ಎಸ್ ಮತ್ತು ಹಿಂದೂ ಸಂಘಟನೆಗಳು ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಹೀಗಿರುವಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಚರ್ಚ್ಗಳ ಮೇಲಿನ ದಾಳಿಗಳನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡಿದ್ದಾರೆ. ಈ ಹೊತ್ತಲೇ ಅಕ್ಟೋಬರ್ 21ಕ್ಕೆ ಆರ್‌ಎಸ್‌ಎಸ್‌, ಬಿಜೆಪಿ ತುರ್ತು ಸಮನ್ವಯ ಬೈಠಕ್ ಅನ್ನು ಕರೆದಿದೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 27, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.