ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸಂಚು

ಬೆಂಗಳೂರು ಡಿ1 : ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸಂಚು ಹಾಕಲಾಗಿತ್ತು ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದ್ದು, ಈ ಸಂಬಂಧ ಸಿಸಿಬಿ ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ ಎಂಬುವವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಎಸ್.ಆರ್ ವಿಶ್ವನಾಥ್  ಬಗ್ಗೆ ಗೋಪಾಲಕೃಷ್ಣ ಮಾತನಾಡಿದ್ಧನ್ನ ಕುಳ್ಳದೇವರಾಜ್ ಸ್ಟಿಂಗ್ ವಿಡಿಯೋ ಮಾಡಿದ್ದನು. ಇದರಲ್ಲಿ ಎಸ್.ಆರ್ ವಿಶ್ವನಾಥ್ ಅವರ ವಿರುದ್ಧ ಗೋಪಾಲಕೃಷ್ಣ ಮಾತನಾಡಿದ್ದನು.  ಈ ವಿಡಿಯೋ ಮೂಲಕ ಶಾಸಕ ಎಸ್.ಆರ್ ವಿಶ್ವನಾಥ್ ಗೆ ಹತ್ತಿರವಾಗಲು ಕುಳ್ಳದೇವರಾಜ್ ಯತ್ನಿಸಿದ್ದ ಎನ್ನಲಾಗಿದೆ.

ಈ ಬಳಿಕ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಎಸ್.ಆರ್ ವಿಶ್ವನಾಥ್ ಸೂಚಿಸಿದ್ಧರು. ಈ ಹಿನ್ನೆಲೆಯಲ್ಲಿ ಇಬ್ಬರನ್ನ ಸಿಸಿಬಿ ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಅಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತೇನೆ. ಎಸ್.ಆರ್ ವಿಶ್ವನಾಥ್ ಜೊತೆ ಮಾತಾಡುತ್ತೇನೆ. ವಿಶ್ವನಾಥ್ ಹೇಳಿಕೆ ಮೇರೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Exit mobile version