ಸಚಿವ ಸಂಪುಟ ವಿಸ್ತರಣೆ: ಅಸಮಾಧಾನಿತರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಲಿ: ಬಿಎಸ್‌ವೈ

ಬೆಂಗಳೂರು, ಜ. 14: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಈ ನಡುವೆ ಅಸಮಾಧಾನಿತ ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅಸಮಾಧಾನವಿದೆ ಆ ಶಾಸಕರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಿ. ಈ ಬಗ್ಗೆ ನನಗೆ ಅಭ್ಯಂತರವಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಶಾಸಕರಿಗೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಅಸಮಾಧಾನವಿದೆಯೋ ಆ ಶಾಸಕರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಿ. ಈ ಬಗ್ಗೆ ನನಗೆ ಅಭ್ಯಂತರವಿಲ್ಲ.

ಅತೃಪ್ತ ಶಾಸಕರು ಮನಸ್ಸಿಗೆ ಬಂದಂತೆ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತ ಕೆಲಸವನ್ನು ಮಾಡಬಾರದು. ಯಾವುದೇ ಬೆಳವಣಿಗೆಯಾದಲ್ಲಿ ಕೂಡಾ ಪಕ್ಷದ ವರಿಷ್ಠರು ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ. “ಯಾವುದು ತಪ್ಪೋ ಅಥವಾ ಯಾವುದು ಸರಿ ಎನ್ನುವುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ನಮ್ಮ ಶಾಸಕರು ಸುಖಾಸುಮ್ಮನೆ ಹೇಳಿಕೆ ನೀಡುವ ಬದಲಾಗಿ ವರಿಷ್ಠರ ಬಳಿ ತೆರಳಿ ದೂರು ಸಲ್ಲಿಸಲಿ ಎಂದಿದ್ದಾರೆ.

Exit mobile version