ಸಚಿವ ಸ್ಥಾನದ ಆಕಾಂಕ್ಷಿ ಎಚ್.ವಿಶ್ವನಾಥ್ಗೆ ಹೈಕೋರ್ಟ್ ಶಾಕ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಗೆ ಶಾಕ್ ನೀಡಿದ್ದು, ಸಚಿವರಾಗಲು ವಿಶ್ವನಾಥ್ ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಸಂವಿಧಾನದ ಆರ್ಟಿಕಲ್ 164(1ಬಿ), 361ಬಿ ಅಡಿ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯಪೀಠ ಆದೇಶಿಸಿದೆ. ರಾಜ್ಯಪಾಲರಿಗೆ ನಿರ್ದೇಶನ ನೀಡಲು ಕೋರ್ಟ್ ನಿರಾಕರಿಸಿದೆ. ಆದರೆ ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠ ರಿಲೀಫ್ ನೀಡಿದೆ.

Exit mobile version