ಬೆಂಗಳೂರು, ಡಿ. 09: ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದು ಬೆನ್ನುಮೂಳೆಗೆ ಪೆಟ್ಟಾದ ಕಾರಣ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಬುಧವಾರ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ.
ಬೆಂಗಳೂರಿನ ಮಂಜುನಾಥ ನಗರದ ಮನೆಯಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ನಂತರ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.