• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ! ಕನ್ನಡದ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ

padma by padma
in ಪ್ರಮುಖ ಸುದ್ದಿ, ರಾಜ್ಯ
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ! ಕನ್ನಡದ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ
0
SHARES
0
VIEWS
Share on FacebookShare on Twitter

ಪುಷ್ಪಕ ವಿಮಾನ’, ‘ಸುಂದರಾಂಗ ಜಾಣ’, ‘ದೇವಕಿ’ ಮುಂತಾದ ಅನೇಕ ಚಿತ್ರಗಳಿಗೆ ಸಂಭಾಷಣೆ ಬರೆದು ಸೈ ಎನಿಸಿಕೊಂಡಿದ್ದ ಪ್ರತಿಭಾವಂತ ಬರಹಗಾರ ಗುರು ಕಶ್ಯಪ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಸೋಮವಾರ (ಸೆ.13) ರಾತ್ರಿ ಅವರು ಇಹಲೋಕ ತ್ಯಜಿಸಿದರು.

ಕನ್ನಡದ ಪ್ರತಿಭಾವಂತ ಸಂಭಾಷಣಾಕಾರ, ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್​ ಅವರು ಸೋಮವಾರ (ಸೆ.13) ರಾತ್ರಿ ನಿಧನರಾದರು. ಹೃದಯಾಘಾತದಿಂದ ಅವರು ಮೃತಪಟ್ಟರು ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು ಎನ್ನಲಾಗುತ್ತಿದೆ.  ಗಣೇಶ್​ ಅಭಿನಯದ ‘ಸುಂದರಾಂಗ ಜಾಣ’, ರಮೇಶ್​ ಅರವಿಂದ್​ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ಅಭಿನಯದ ‘ದೇವಕಿ’ ಮುಂತಾದ ಸಿನಿಮಾಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದರು. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ.

            ಗುರು ಕಶ್ಯಪ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ‘ಗುರು ದೇವರಂಥ ಮನುಷ್ಯ ಆಗಿದ್ದರು. ಅತ್ಯುತ್ತಮ ಸಂಭಾಷಣಕಾರನನ್ನು ಚಂದನವನ ಇಂದು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ‘ಪುಷ್ಪಕ ವಿಮಾನ’ ನಿರ್ದೇಶಕ ರವೀಂದ್ರನಾಥ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

15ಕ್ಕೂ ಹೆಚ್ಚು ಸಿನಿಮಾಗಳಿಗೆ ಗುರು ಕಶ್ಯಪ್​ ಕೆಲಸ ಮಾಡಿದ್ದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ನಿಧನಕ್ಕೂ ಮುನ್ನ ಅನೇಕ ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಡಾಲಿ ಧನಂಜಯ ನಟನೆಯ ‘ಮಾನ್ಸೂನ್​ ರಾಗ’, ಶಿವರಾಜ್​ಕುಮಾರ್​ ಅಭಿನಯದ ‘ಬೈರಾಗಿ’, ‘ವ್ಹೀಲ್​ ಚೇರ್​ ರೋಮಿಯೋ’ ಮುಂತಾದ ಸಿನಿಮಾಗಳಿಗೆ ಅವರು ಡೈಲಾಗ್​ ಬರೆಯುತ್ತಿದ್ದರು. ಆ ಸಿನಿಮಾಗಳು ತೆರೆಕಾಣುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದಾರೆ. ಪತ್ನಿ ಮತ್ತು ಮಗಳನ್ನು ಗುರು ಕಶ್ಯಪ್​ ಅಗಲಿದ್ದಾರೆ.

‘ಇದು ನಿಜಕ್ಕೂ ಶಾಕಿಂಗ್​. ಈ ಸತ್ಯವನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ. ಸದಾ ತಾಳ್ಮೆಯಿಂದ ನನ್ನ ಕಥೆಗಳನ್ನು ಕೇಳಿ, ಅವುಗಳಿಗೆ ಮೆಚ್ಚುಗೆ ಸೂಚಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಬರಹಗಳ ಫಸ್ಟ್​ ಡ್ರಾಫ್ಟ್​ ಓದುವುದನ್ನು ಮಿಸ್​ ಮಾಡಿಕೊಳ್ಳುತ್ತೇನೆ ಸರ್​’ ಎಂದು ನಟಿ ಆರೋಹಿ ನಾರಾಯಣ್​ ಪೋಸ್ಟ್​ ಮಾಡಿದ್ದಾರೆ.

‘ಗುರು ಕಶ್ಯಪ್​ ತುಂಬ ಪ್ರತಿಭಾವಂತ ವ್ಯಕ್ತಿ ಆಗಿದ್ದರು. ಕೆಲವೇ ದಿನಗಳ ಹಿಂದೆ ಅವರ ಜೊತೆ ಕೆಲಸ ಮಾಡಿದ್ದೆ. ಒಂದೊಳ್ಳೆಯ ಪ್ರತಿಭೆಯನ್ನು ನಾವು ಕಳೆದುಕೊಂಡೆವು. ಇದು ಶಾಕಿಂಗ್​. ಈ ಸುದ್ದಿ ಕೇಳಲು ಬೇಸರ ಆಗುತ್ತಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸಹೋದರನೇ’ ಎಂದು ‘ಶಿವಾಜಿ ಸುರತ್ಕಲ್​’ ನಿರ್ದೇಶಕ ಆಕಾಶ್​ ಶ್ರೀವತ್ಸ ಅವರು ಗುರು ಕಶ್ಯಪ್​ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.